<p><strong>ಹೊಸಪೇಟೆ(ವಿಜಯನಗರ):</strong> ನಗರದ ವಿವಿಧ ಬಡಾವಣೆಗಳು ಮೂಲಸೌಕರ್ಯವಿಲ್ಲದೆ ಸಮಸ್ಯೆ ಎದುರಿಸುತ್ತಿದ್ದು, ಅದನ್ನು ಕಲ್ಪಿಸಲು ನಗರಸಭೆ ಕ್ರಮ ಕೈಗೊಳ್ಳಬೇಕು ಎಂದು ಅಹಿಂದ ಯುವ ವೇದಿಕೆ ಆಗ್ರಹಿಸಿದೆ.</p>.<p>ಈ ಸಂಬಂಧ ವೇದಿಕೆಯ ಮುಖಂಡರು ಗುರುವಾರ ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.</p>.<p>‘ನಗರದ 32ನೇ ವಾರ್ಡ್, ಏಳು ಮಕ್ಕಳ ತಾಯಮ್ಮ ದೇವಸ್ಥಾನದ ಏರಿಯಾ ಹಾಗೂ ಮೇದಾರ್ ರಸ್ತೆಯಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಇರುವ ಬೋರ್ವೆಲ್ನ ಮೋಟಾರ್ ಸುಟ್ಟಿರುವುದರಿಂದ ಸ್ಥಳೀಯರು ನೀರಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p>‘ಬಳ್ಳಾರಿ ದುರುಗಮ್ಮ ದೇವಸ್ಥಾನ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಅಳವಡಿಸುವ ಸಂದರ್ಭದಲ್ಲಿ ರಸ್ತೆ ಹಾಳಾಗಿದೆ. ಆದಷ್ಟು ಬೇಗನೆ ದುರಸ್ತಿಪಡಿಸಿ ಸಾರ್ವಜನಿಕರ ಬಳಕೆಗೆ ಅನುಕೂಲ ಮಾಡಿಕೊಡಬೇಕು’ ಎಂದು ವೇದಿಕೆಯ ತಾಲ್ಲೂಕು ಅಧ್ಯಕ್ಷ ಕುಬೇರ ದಲ್ಲಾಳಿ, ಉಪಾಧ್ಯಕ್ಷ ಕೇಶವ.ಕೆ, ದೇವರಾಜ್, ಖಾಜಾ ಹುಸೇನ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ(ವಿಜಯನಗರ):</strong> ನಗರದ ವಿವಿಧ ಬಡಾವಣೆಗಳು ಮೂಲಸೌಕರ್ಯವಿಲ್ಲದೆ ಸಮಸ್ಯೆ ಎದುರಿಸುತ್ತಿದ್ದು, ಅದನ್ನು ಕಲ್ಪಿಸಲು ನಗರಸಭೆ ಕ್ರಮ ಕೈಗೊಳ್ಳಬೇಕು ಎಂದು ಅಹಿಂದ ಯುವ ವೇದಿಕೆ ಆಗ್ರಹಿಸಿದೆ.</p>.<p>ಈ ಸಂಬಂಧ ವೇದಿಕೆಯ ಮುಖಂಡರು ಗುರುವಾರ ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.</p>.<p>‘ನಗರದ 32ನೇ ವಾರ್ಡ್, ಏಳು ಮಕ್ಕಳ ತಾಯಮ್ಮ ದೇವಸ್ಥಾನದ ಏರಿಯಾ ಹಾಗೂ ಮೇದಾರ್ ರಸ್ತೆಯಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಇರುವ ಬೋರ್ವೆಲ್ನ ಮೋಟಾರ್ ಸುಟ್ಟಿರುವುದರಿಂದ ಸ್ಥಳೀಯರು ನೀರಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p>‘ಬಳ್ಳಾರಿ ದುರುಗಮ್ಮ ದೇವಸ್ಥಾನ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಅಳವಡಿಸುವ ಸಂದರ್ಭದಲ್ಲಿ ರಸ್ತೆ ಹಾಳಾಗಿದೆ. ಆದಷ್ಟು ಬೇಗನೆ ದುರಸ್ತಿಪಡಿಸಿ ಸಾರ್ವಜನಿಕರ ಬಳಕೆಗೆ ಅನುಕೂಲ ಮಾಡಿಕೊಡಬೇಕು’ ಎಂದು ವೇದಿಕೆಯ ತಾಲ್ಲೂಕು ಅಧ್ಯಕ್ಷ ಕುಬೇರ ದಲ್ಲಾಳಿ, ಉಪಾಧ್ಯಕ್ಷ ಕೇಶವ.ಕೆ, ದೇವರಾಜ್, ಖಾಜಾ ಹುಸೇನ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>