<p><strong>ಹೊಸಪೇಟೆ (ವಿಜಯನಗರ):</strong> ರಾಜ್ಯ ಬಜೆಟ್ ಶುಕ್ರವಾರ ಮಂಡನೆಯಾಗಲಿದ್ದು, ಈ ಬಜೆಟ್ ದಲಿತರ, ಬಡವರ ಮನೆಗಳಿಗೆ ತಲುಪುವಂತಾಗಬೇಕು ಎಂದು ದಲಿತ ಹಕ್ಕುಗಳ ಸಮಿತಿ ಕರ್ನಾಟಕ (ಡಿಎಚ್ಎಸ್) ಸರ್ಕಾರವನ್ನು ಒತ್ತಾಯಿಸಿದೆ.</p>.<p>ಡಿಎಚ್ಎಸ್ ಜಿಲ್ಲಾ ಘಟಕದ ಅಧ್ಯಕ್ಷ ಜಂಬಯ್ಯ ನಾಯಕ ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿ ಗುರುವಾರ ಸಮಾವೇಶಗೊಂಡ ಮುಖಂಡರು, ರಾಜ್ಯದಲ್ಲಿ ದಲಿತರು ಶೇ 24.17ರಷ್ಟಿದ್ದು, 13 ವರ್ಷಗಳಿಂದ ₹3.46 ಲಕ್ಷ ವೆಚ್ಚ ಮಾಡಲಾಗಿದೆ ಎಂದು ಸರ್ಕಾರದ ಅಂಕಿ ಅಂಶಗಳು ಹೇಳುತ್ತವೆ. ಆದರೆ ಈ ಹಣ ನಿಜವಾಗಿ ದಲಿತರ ಕುಟುಂಬಗಳ ಅಭಿವೃದ್ದಿಗೆ ತಲುಪಿಲ್ಲ ಎಂಬುದನ್ನು ತಿಳಿಸಿದರು.</p>.<p>ಹಕ್ಕೊತ್ತಾಯಗಳು: ಮನೆ, ನಿವೇಶನ, ಭೂಮಿ, ಶಿಕ್ಷಣ, ಉದ್ಯೋಗ, ಆಹಾರ– ಆರೋಗ್ಯದ ಹಕ್ಕು ದಲಿತರಿಗೆ ಸಿಗುವಂತೆ ಬಜೆಟ್ ಮಂಡಿಸಬೇಕು, ಎಸ್ಸಿಎಸ್ಪಿ, ಟಿಎಸ್ಪಿ ಉಪಯೋಜನೆಗಳ ಸಾಧಕ ಬಾಧಕಗಳ ಕುರಿತು ವಿಧಾನಸಭೆಯಲ್ಲಿ ಸಮಗ್ರ ಚರ್ಚೆಯಾಗಬೇಕು. ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ವಿಶೇಷ ಹಣಕಾಸಿನ ನೆರವು ನೀಡಬೇಕು. ಕಳೆದ 24-ವರ್ಷಗಳಿಂದ ದುಡಿಯುತ್ತಿರುವ ಇಲ್ಲಿನ ಹೊರಗುತ್ತಿಗೆ ನೌಕರರ 11-ತಿಂಗಳ ಸಂಬಳ ಪಾವತಿಗೆ ಕ್ರಮ ಕೈಗೊಳ್ಳಬೇಕು. ಹೊಸಪೇಟೆಯಲ್ಲಿ ಸರ್ಕಾರ, ಸಹಕಾರಿ ಅಥವಾ ಖಾಸಗಿ ಸಹಭಾಗಿತ್ವದಲ್ಲಿ ತಕ್ಷಣ ಸಕ್ಕರೆ ಕಾರ್ಖಾನೆ ಪ್ರಾರಂಭಿಸಬೇಕು. ಎಸ್ಸಿಎಸ್ಟಿ ನಿರುದ್ಯೋಗಿಗಳಿಗೆ ಮಾಸಿಕ ₹10 ಸಾವಿರ ನಿರುದ್ಯೋಗ ಭತ್ಯೆ ನೀಡಬೇಕು. ಜತೆಗೆ ಇನ್ನಷ್ಟು ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಯಿತು.</p>.<p>ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಕಳುಹಿಸಿಕೊಡಲಾಯಿತು. ಮುಖಂಡರಾದ ಬಿ.ತಾಯಪ್ಪ ನಾಯಕ, ಎಚ್.ಡಿ.ಚಂದ್ರಪ್ಪ, ಸೂರ್ಯನಾರಾಯಣ, ನಾಗೂ ನಾಯ್ಕ್, ಗದಿಗೆಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ರಾಜ್ಯ ಬಜೆಟ್ ಶುಕ್ರವಾರ ಮಂಡನೆಯಾಗಲಿದ್ದು, ಈ ಬಜೆಟ್ ದಲಿತರ, ಬಡವರ ಮನೆಗಳಿಗೆ ತಲುಪುವಂತಾಗಬೇಕು ಎಂದು ದಲಿತ ಹಕ್ಕುಗಳ ಸಮಿತಿ ಕರ್ನಾಟಕ (ಡಿಎಚ್ಎಸ್) ಸರ್ಕಾರವನ್ನು ಒತ್ತಾಯಿಸಿದೆ.</p>.<p>ಡಿಎಚ್ಎಸ್ ಜಿಲ್ಲಾ ಘಟಕದ ಅಧ್ಯಕ್ಷ ಜಂಬಯ್ಯ ನಾಯಕ ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿ ಗುರುವಾರ ಸಮಾವೇಶಗೊಂಡ ಮುಖಂಡರು, ರಾಜ್ಯದಲ್ಲಿ ದಲಿತರು ಶೇ 24.17ರಷ್ಟಿದ್ದು, 13 ವರ್ಷಗಳಿಂದ ₹3.46 ಲಕ್ಷ ವೆಚ್ಚ ಮಾಡಲಾಗಿದೆ ಎಂದು ಸರ್ಕಾರದ ಅಂಕಿ ಅಂಶಗಳು ಹೇಳುತ್ತವೆ. ಆದರೆ ಈ ಹಣ ನಿಜವಾಗಿ ದಲಿತರ ಕುಟುಂಬಗಳ ಅಭಿವೃದ್ದಿಗೆ ತಲುಪಿಲ್ಲ ಎಂಬುದನ್ನು ತಿಳಿಸಿದರು.</p>.<p>ಹಕ್ಕೊತ್ತಾಯಗಳು: ಮನೆ, ನಿವೇಶನ, ಭೂಮಿ, ಶಿಕ್ಷಣ, ಉದ್ಯೋಗ, ಆಹಾರ– ಆರೋಗ್ಯದ ಹಕ್ಕು ದಲಿತರಿಗೆ ಸಿಗುವಂತೆ ಬಜೆಟ್ ಮಂಡಿಸಬೇಕು, ಎಸ್ಸಿಎಸ್ಪಿ, ಟಿಎಸ್ಪಿ ಉಪಯೋಜನೆಗಳ ಸಾಧಕ ಬಾಧಕಗಳ ಕುರಿತು ವಿಧಾನಸಭೆಯಲ್ಲಿ ಸಮಗ್ರ ಚರ್ಚೆಯಾಗಬೇಕು. ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ವಿಶೇಷ ಹಣಕಾಸಿನ ನೆರವು ನೀಡಬೇಕು. ಕಳೆದ 24-ವರ್ಷಗಳಿಂದ ದುಡಿಯುತ್ತಿರುವ ಇಲ್ಲಿನ ಹೊರಗುತ್ತಿಗೆ ನೌಕರರ 11-ತಿಂಗಳ ಸಂಬಳ ಪಾವತಿಗೆ ಕ್ರಮ ಕೈಗೊಳ್ಳಬೇಕು. ಹೊಸಪೇಟೆಯಲ್ಲಿ ಸರ್ಕಾರ, ಸಹಕಾರಿ ಅಥವಾ ಖಾಸಗಿ ಸಹಭಾಗಿತ್ವದಲ್ಲಿ ತಕ್ಷಣ ಸಕ್ಕರೆ ಕಾರ್ಖಾನೆ ಪ್ರಾರಂಭಿಸಬೇಕು. ಎಸ್ಸಿಎಸ್ಟಿ ನಿರುದ್ಯೋಗಿಗಳಿಗೆ ಮಾಸಿಕ ₹10 ಸಾವಿರ ನಿರುದ್ಯೋಗ ಭತ್ಯೆ ನೀಡಬೇಕು. ಜತೆಗೆ ಇನ್ನಷ್ಟು ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಯಿತು.</p>.<p>ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಕಳುಹಿಸಿಕೊಡಲಾಯಿತು. ಮುಖಂಡರಾದ ಬಿ.ತಾಯಪ್ಪ ನಾಯಕ, ಎಚ್.ಡಿ.ಚಂದ್ರಪ್ಪ, ಸೂರ್ಯನಾರಾಯಣ, ನಾಗೂ ನಾಯ್ಕ್, ಗದಿಗೆಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>