ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಫಲಕಗಳ ಸಂಪೂರ್ಣ ಅನುಷ್ಠಾನಕ್ಕೆ ಆಗ್ರಹ

Last Updated 15 ಅಕ್ಟೋಬರ್ 2021, 12:26 IST
ಅಕ್ಷರ ಗಾತ್ರ

ಹೊಸಪೇಟೆ(ವಿಜಯನಗರ): ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕಡ್ಡಾಯ ಕನ್ನಡ ಫಲಕ ಅಳವಡಿಕೆಗೆ ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ.

ಈ ಸಂಬಂಧ ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ನಗರಸಭೆ ಪೌರಾಯುಕ್ತ ಮನ್ಸೂರ್‌ ಅಲಿ ಅವರಿಗೆ ವಿವಿಧ ಕನ್ನಡ ಪರ ಸಂಘಟನೆಗಳು ಮನವಿ ಸಲ್ಲಿಸಿ ಒತ್ತಾಯಿಸಿವೆ.

ಅಂಗಡಿ, ಹೋಟಲ್, ವಸತಿಗೃಹ, ಮದ್ಯದಂಗಡಿ, ಚಿತ್ರಮಂದಿರ ಹಾಗೂ ವಾಣಿಜ್ಯ ಕೇಂದ್ರಗಳ ಜಾಹೀರಾತು ಫಲಕಗಳಿಗೆ ಕನ್ನಡ ಕಡ್ಡಾಯವಾಗಿ ಆಳವಡಿಸಲು ಸೂಚಿಸಬೇಕು. ಎಲ್ಲಾ ರೀತಿಯ ವಾಣಿಜ್ಯ ಕೇಂದ್ರಗಳಿಗೂ ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡುವುದರ ಜೊತೆಗೆ ಸಂಚಾರ ಪೊಲೀಸ್ ಠಾಣೆಯಿಂದ ನಗರದಲ್ಲಿ ಆಳವಡಿಸಿರುವ ಸೂಚನಾ ಫಲಕಗಳಲ್ಲಿ ಕನ್ನಡ ಅಕ್ಷರ ಮತ್ತು ಸಂಖ್ಯೆಯನ್ನು ನಮೂದಿಸಬೇಕು. ಸರ್ಕಾರಿ ವಾಹನಗಳಲ್ಲಿ ಕನ್ನಡದ ನೋಂದಣಿ ಫಲಕ ಆಳವಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ), ಯುವಸೇನೆ, ಕರುನಾಡ ಕಲಿಗಳ ಕ್ರಿಯಾಶೀಲ ಸಮಿತಿ ಆಗ್ರಹಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT