<p><strong>ಹೊಸಪೇಟೆ:</strong> ಅಖಂಡ ಬಳ್ಳಾರಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದವರನ್ನು ಏಕಾಏಕಿ ವಜಾಗೊಳಿಸಿರುವ ಕ್ರಮವನ್ನು ಖಂಡಿಸಿ ಸಿಐಟಿಯು ಕಾರ್ಯಕರ್ತರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಕೂಡಲೇ 286 ಕಾರ್ಮಿಕರನ್ನು ಮರುನೇಮಕ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಆಗ್ರಹಿಸಿದರು.</p>.<p>ಸಿರುಗುಪ್ಪ, ಕಂಪ್ಲಿ, ಸಂಡೂರು, ಕುರೆಕುಪ್ಪ, ತೆಕ್ಕಲಕೊಟೆ, ಕುಡುತಿನಿ, ಕಮಲಾಪುರ, ಕೂಡ್ಲಿಗಿ, ಕೊಟ್ಟೂರು ಮತ್ತು ಹೂವಿನ ಹಡಗಲಿ ಸ್ಥಳೀಯ ಸಂಸ್ಥೆಗಳಲ್ಲಿ ಕಳೆದ 20 ವರ್ಷಗಳಿದ್ದ ದುಡಿಯುತ್ತಿದ್ದ 286 ಕಾರ್ಮಿಕರನ್ನು ಎಫ್.ಬಿ.ಎ.ಎಸ್ ತಂತ್ರಾಂಶದಲ್ಲಿ ಅಳವಡಿಸಲು ಸಾಧ್ಯವಿಲ್ಲ ಎಂಬ ನೆಪವೊಡ್ಡಿ ವಜಾಗೊಳಿಸಲಾಗಿದೆ. ಕೆಲಸ ಕಳೆದುಕೊಂಡ ಕಾರ್ಮಿಕ ಕುಟುಂಬಗಳು ಬೀದಿ ಪಾಲಾಗಿವೆ ಎಂದು ಸಿಐಟಿಯು ಮುಖಂಡರು ಆರೋಪಿಸಿದರು.</p>.<p>ವಜಾಗೊಳಿಸಿರುವ ಹೊರಗುತ್ತಿಗೆ ಮತ್ತು ದಿನಗೂಲಿ ನೌಕರರನ್ನು ಮರುನೇಮಕಗೊಳಿಸಿ ಕಾರ್ಮಿಕರ ಸೇವಾ ಹಿರಿತನವನ್ನು ಮುಂದುವರೆಸಲು ಕಾರ್ಮಿಕರೊಂದಿಗೆ ಜಂಟಿ ಸಭೆಯನ್ನು ನಡೆಸಬೇಕು ಎಂದು ಒತ್ತಾಯಿಸಿದರು.</p>.<p>ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಆರ್.ಭಾಸ್ಕರ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಜೆ.ಸತ್ಯಬಾಬು, ಅಭಿಲಾಷ್, ಅನಿಲ್, ಆದಿಶೇಷ ಮತ್ತು ಎನ್.ತಿಮ್ಮಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ಅಖಂಡ ಬಳ್ಳಾರಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದವರನ್ನು ಏಕಾಏಕಿ ವಜಾಗೊಳಿಸಿರುವ ಕ್ರಮವನ್ನು ಖಂಡಿಸಿ ಸಿಐಟಿಯು ಕಾರ್ಯಕರ್ತರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಕೂಡಲೇ 286 ಕಾರ್ಮಿಕರನ್ನು ಮರುನೇಮಕ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಆಗ್ರಹಿಸಿದರು.</p>.<p>ಸಿರುಗುಪ್ಪ, ಕಂಪ್ಲಿ, ಸಂಡೂರು, ಕುರೆಕುಪ್ಪ, ತೆಕ್ಕಲಕೊಟೆ, ಕುಡುತಿನಿ, ಕಮಲಾಪುರ, ಕೂಡ್ಲಿಗಿ, ಕೊಟ್ಟೂರು ಮತ್ತು ಹೂವಿನ ಹಡಗಲಿ ಸ್ಥಳೀಯ ಸಂಸ್ಥೆಗಳಲ್ಲಿ ಕಳೆದ 20 ವರ್ಷಗಳಿದ್ದ ದುಡಿಯುತ್ತಿದ್ದ 286 ಕಾರ್ಮಿಕರನ್ನು ಎಫ್.ಬಿ.ಎ.ಎಸ್ ತಂತ್ರಾಂಶದಲ್ಲಿ ಅಳವಡಿಸಲು ಸಾಧ್ಯವಿಲ್ಲ ಎಂಬ ನೆಪವೊಡ್ಡಿ ವಜಾಗೊಳಿಸಲಾಗಿದೆ. ಕೆಲಸ ಕಳೆದುಕೊಂಡ ಕಾರ್ಮಿಕ ಕುಟುಂಬಗಳು ಬೀದಿ ಪಾಲಾಗಿವೆ ಎಂದು ಸಿಐಟಿಯು ಮುಖಂಡರು ಆರೋಪಿಸಿದರು.</p>.<p>ವಜಾಗೊಳಿಸಿರುವ ಹೊರಗುತ್ತಿಗೆ ಮತ್ತು ದಿನಗೂಲಿ ನೌಕರರನ್ನು ಮರುನೇಮಕಗೊಳಿಸಿ ಕಾರ್ಮಿಕರ ಸೇವಾ ಹಿರಿತನವನ್ನು ಮುಂದುವರೆಸಲು ಕಾರ್ಮಿಕರೊಂದಿಗೆ ಜಂಟಿ ಸಭೆಯನ್ನು ನಡೆಸಬೇಕು ಎಂದು ಒತ್ತಾಯಿಸಿದರು.</p>.<p>ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಆರ್.ಭಾಸ್ಕರ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಜೆ.ಸತ್ಯಬಾಬು, ಅಭಿಲಾಷ್, ಅನಿಲ್, ಆದಿಶೇಷ ಮತ್ತು ಎನ್.ತಿಮ್ಮಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>