ಸಮಾನತೆ ಯೂನಿಯನ್ ರಾಜ್ಯ ಸಂಚಾಲಕ ರಾಮಚಂದ್ರ ಮಾತನಾಡಿ, ಆರೋಗ್ಯವನ್ನು ಲೆಕ್ಕಿಸದೆ ಕೆಲಸ ಮಾಡುವ ಪೌರಕಾರ್ಮಿಕರು ಹಾಗೂ ಯುಜಿಡಿ ಕಾರ್ಮಿಕರಿಗೆ ಮಾಸಿಕ ಕನಿಷ್ಠ ₹31,000 ವೇತನ ಹಾಗೂ ನಿತ್ಯ ₹70 ಉಪಾಹಾರ, ₹100 ಊಟದ ಭತ್ಯೆ ನೀಡಬೇಕು. ರಾಜ್ಯದ ಎಲ್ಲ ಸಫಾಯಿ ಕರ್ಮಚಾರಿಗಳು ಮತ್ತು ಅವಲಂಬಿತರಿಗೆ ಗುರುತಿನ ಚೀಟಿ ನೀಡಬೇಕು ಎಂದು ಒತ್ತಾಯಿಸಿದರು. ಸುರೇಶ್, ರಾಜ, ಕೃಷ್ಣ, ಶ್ರೀನಿವಾಸುಲು ಇದ್ದರು.