<p><strong>ಹೊಸಪೇಟೆ(ವಿಜಯನಗರ):</strong> ಇ-ವಾಣಿಜ್ಯ ಆಹಾರ ಪೂರೈಕೆದಾರರಿಗೆ ಲಾಕ್ಡೌನ್ ಸಮಯದಲ್ಲಿ ಸರ್ಕಾರದ ವತಿಯಿಂದ ಅಗತ್ಯ ಪ್ಯಾಕೇಜ್ ಒದಗಿಸಬೇಕು ಎಂದು ಯುನೈಟೆಡ್ ಫುಡ್ ಡೆಲಿವರಿ ಪಾರ್ಟನರ್ಸ್ ಸಂಘಟನೆ ಒತ್ತಾಯಿಸಿದೆ.</p>.<p>ಕುಟುಂಬ ನಿರ್ವಹಣೆಗೆ ಈ ದುಡಿಮೆಯ ಮೇಲೆ ಅವಲಂಬಿತರಾದವರು ಹೆಚ್ಚು. ಈ ವಿಷಯವನ್ನು ಸರ್ಕಾರದ ಗಮನಕ್ಕೆ ಈ ಹಿಂದೆಯೂ ತರಲಾಗಿದೆ. ನಮ್ಮ ಯೂನಿಯನ್ ವತಿಯಿಂದ ಕಳೆದ ಬಾರಿ ದಿಢೀರನೆ ಲಾಕ್ಡೌನ್ ವಿಧಿಸಿದಾಗಲೂ ಪರಿಹಾರ ಪ್ಯಾಕೇಜ್ ಘೋಷಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದೆವು. ಆದರೆ ನಮ್ಮ ಬೇಡಿಕೆಯನ್ನು ಸರ್ಕಾರ ನಿರ್ಲಕ್ಷಿಸಿದೆ ಎಂದು ಯೂನಿಯನ್ ಉಪಾಧ್ಯಕ್ಷ ಯರಿಸ್ವಾಮಿ ಮುಂಡರಗಿ ಆರೋಪಿಸಿದ್ದಾರೆ.</p>.<p>ಈ ಬಾರಿಯ ಲಾಕ್ ಡೌನ್ ನಲ್ಲೂ ಕೆಲ ಕಾರ್ಮಿಕರು ತಮ್ಮ ಊರುಗಳಿಗೆ ಹಿಂದಿರುಗಿದ್ದಾರೆ. ಸಾಕಷ್ಟು ಜನ ಕೆಲಸ ನಿರ್ವಹಿಸುತ್ತಿದ್ದಾರೆ. ವ್ಯಾಪಾರದ ಕುಂಠಿತ ಜೊತೆಗೆ ಪೆಟ್ರೋಲ್ ಬೆಲೆ ಏರಿದೆ. ಇವರು ಹೆಚ್ಚಿನ ಜನರನ್ನು ಭೇಟಿ ಮಾಡುವುದರಿಂದ ಹೈ-ರಿಸ್ಕ್ ನಲ್ಲಿ ಕೆಲಸ ನಿರ್ವಹಿಸುತ್ತಾರೆ. ಹೀಗಾಗಿ ಇವರ ಕುಟುಂಬಸ್ಥರು ಅಪಾಯದ ಅಂಚಿನಲ್ಲಿ ಇರುತ್ತಾರೆ. ಸಾಂಕ್ರಾಮಿಕ ರೋಗದ ವಿಷಮ ಪರಿಸ್ಥಿತಿಯಲ್ಲಿ ಕಾರ್ಮಿಕರು ಸೇವೆಯನ್ನು ನೀಡುತ್ತಿದ್ದಾರೆ. ರಾಜ್ಯ ಸರ್ಕಾರ ಈ ಕೂಡಲೇ ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳ ಪ್ಯಾಕೇಜ್ ಘೋಷಿಸಬೇಕೆಂದು ಯುನಿಯನ್ ಉಪಾಧ್ಯಕ್ಷ ಯರಿಸ್ವಾಮಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ(ವಿಜಯನಗರ):</strong> ಇ-ವಾಣಿಜ್ಯ ಆಹಾರ ಪೂರೈಕೆದಾರರಿಗೆ ಲಾಕ್ಡೌನ್ ಸಮಯದಲ್ಲಿ ಸರ್ಕಾರದ ವತಿಯಿಂದ ಅಗತ್ಯ ಪ್ಯಾಕೇಜ್ ಒದಗಿಸಬೇಕು ಎಂದು ಯುನೈಟೆಡ್ ಫುಡ್ ಡೆಲಿವರಿ ಪಾರ್ಟನರ್ಸ್ ಸಂಘಟನೆ ಒತ್ತಾಯಿಸಿದೆ.</p>.<p>ಕುಟುಂಬ ನಿರ್ವಹಣೆಗೆ ಈ ದುಡಿಮೆಯ ಮೇಲೆ ಅವಲಂಬಿತರಾದವರು ಹೆಚ್ಚು. ಈ ವಿಷಯವನ್ನು ಸರ್ಕಾರದ ಗಮನಕ್ಕೆ ಈ ಹಿಂದೆಯೂ ತರಲಾಗಿದೆ. ನಮ್ಮ ಯೂನಿಯನ್ ವತಿಯಿಂದ ಕಳೆದ ಬಾರಿ ದಿಢೀರನೆ ಲಾಕ್ಡೌನ್ ವಿಧಿಸಿದಾಗಲೂ ಪರಿಹಾರ ಪ್ಯಾಕೇಜ್ ಘೋಷಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದೆವು. ಆದರೆ ನಮ್ಮ ಬೇಡಿಕೆಯನ್ನು ಸರ್ಕಾರ ನಿರ್ಲಕ್ಷಿಸಿದೆ ಎಂದು ಯೂನಿಯನ್ ಉಪಾಧ್ಯಕ್ಷ ಯರಿಸ್ವಾಮಿ ಮುಂಡರಗಿ ಆರೋಪಿಸಿದ್ದಾರೆ.</p>.<p>ಈ ಬಾರಿಯ ಲಾಕ್ ಡೌನ್ ನಲ್ಲೂ ಕೆಲ ಕಾರ್ಮಿಕರು ತಮ್ಮ ಊರುಗಳಿಗೆ ಹಿಂದಿರುಗಿದ್ದಾರೆ. ಸಾಕಷ್ಟು ಜನ ಕೆಲಸ ನಿರ್ವಹಿಸುತ್ತಿದ್ದಾರೆ. ವ್ಯಾಪಾರದ ಕುಂಠಿತ ಜೊತೆಗೆ ಪೆಟ್ರೋಲ್ ಬೆಲೆ ಏರಿದೆ. ಇವರು ಹೆಚ್ಚಿನ ಜನರನ್ನು ಭೇಟಿ ಮಾಡುವುದರಿಂದ ಹೈ-ರಿಸ್ಕ್ ನಲ್ಲಿ ಕೆಲಸ ನಿರ್ವಹಿಸುತ್ತಾರೆ. ಹೀಗಾಗಿ ಇವರ ಕುಟುಂಬಸ್ಥರು ಅಪಾಯದ ಅಂಚಿನಲ್ಲಿ ಇರುತ್ತಾರೆ. ಸಾಂಕ್ರಾಮಿಕ ರೋಗದ ವಿಷಮ ಪರಿಸ್ಥಿತಿಯಲ್ಲಿ ಕಾರ್ಮಿಕರು ಸೇವೆಯನ್ನು ನೀಡುತ್ತಿದ್ದಾರೆ. ರಾಜ್ಯ ಸರ್ಕಾರ ಈ ಕೂಡಲೇ ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳ ಪ್ಯಾಕೇಜ್ ಘೋಷಿಸಬೇಕೆಂದು ಯುನಿಯನ್ ಉಪಾಧ್ಯಕ್ಷ ಯರಿಸ್ವಾಮಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>