ರೈತ ಸಂಘದ ಅಧ್ಯಕ್ಷ ಜಿ.ಕರೆಹನುಮಂತ ಮಾತನಾಡಿ, ‘ಹೊಸಪೇಟೆಗೆ ಸಂಬಂಧಪಟ್ಟ ವಿವಿಧ ಗ್ರಾಮಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರು ಅರಣ್ಯ ಹಕ್ಕು ಕಾಯ್ದೆ ಅಡಿ ಒಟ್ಟು 1,120 ಅರ್ಜಿ ಸಲ್ಲಿಸಿದ್ದಾರೆ. ಆದರೆ, ಇದುವರೆಗೂ ಒಂದೇ ಒಂದು ಅರ್ಜಿ ಪರಿಶೀಲಿಸಿ ಇತ್ಯರ್ಥ ಮಾಡಿ ಹಕ್ಕು ಪತ್ರ ನೀಡಿಲ್ಲ’ ಎಂದು ಆರೋಪಿಸಿದರು.