ಹೊಸಪೇಟೆ (ವಿಜಯನಗರ): ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಆಗ್ರಹಿಸಿ ಸೋಮವಾರ ಕರೆ ಕೊಟ್ಟಿರುವ ತಾಲ್ಲೂಕಿನ ಮರಿಯಮ್ಮನಹಳ್ಳಿ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ವಿವಿಧ ಸಂಘ ಸಂಸ್ಥೆಗಳನ್ನು ಒಳಗೊಂಡ ಶಾಶ್ವತ ಕುಡಿಯುವ ನೀರಿನ ಹೋರಾಟ ಸಮಿತಿ ಬಂದ್ಗೆ ಕರೆ ಕೊಟ್ಟಿದೆ. ಸಮಿತಿಯ ನೂರಾರು ಕಾರ್ಯಕರ್ತರು ಪಟ್ಟಣದಲ್ಲಿ ಮೆರವಣಿಗೆ ನಡೆಸಿದರು.ನಂತರ ಮನವಿ ಪತ್ರ ಸಲ್ಲಿಸಿದರು.