<p><strong>ಹರಪನಹಳ್ಳಿ :</strong> 7ನೇ ವೇತನ ಆಯೋಗದಿಂದ ವರದಿ ಪಡೆದು ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಸಮಿತಿಯವರು ಮಂಗಳವಾರ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಪಟ್ಟಣದ ಸರ್ಕಾರಿ ನೌಕರರ ಭವನದಿಂದ ಹೂವಿನ ಹಡಗಲಿ ರಸ್ತೆಯಲ್ಲಿರುವ ಶಾಸಕಿ ಲತಾ ಮಲ್ಲಿಕಾರ್ಜುನ್ ಅವರ ನಿವಾಸದ ವರೆಗೂ ಬೈಕ್ ರ್ಯಾಲಿ ಮೂಲಕ ತೆರಳಿದ ಸರ್ಕಾರಿ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಮನವಿ ಸಲ್ಲಿಸಿದರು.</p>.<p>ಹೊಸ ಪಿಂಚಣಿಗೆ ಒಳಪಡುವ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಕಷ್ಟಕರವಾಗುತ್ತದೆ. ಆದ್ದರಿಂದ ಎನ್.ಪಿ.ಎಸ್ ನೌಕರರಿಗೂ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಸರ್ಕಾರಿ ನೌಕರರಿಗೆ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿದರು.</p>.<p>ತಾಲ್ಲೂಕು ಅಧ್ಯಕ್ಷ ಎಸ್.ರಾಮಪ್ಪ, ರಾಜ್ಯ ಸಮಿತಿ ಸದಸ್ಯ ಬಸವರಾಜ ಸಂಗಪ್ಪನವರ್, ವೆಂಕಟೇಶ ಬಾಗಲಾರ, ಬಿ.ಎಚ್.ಚಂದ್ರಪ್ಪ, ಬಿ.ರುದ್ರಾಚಾರಿ, ಎ.ಸುಮಾ, ಬುಳ್ಳಪ್ಪ, ರಮೇಶ್, ಅತಾವುಲ್ಲಾ, ದೇವೇಂದ್ರಗೌಡ, ಗುರುಪ್ರಸಾದ್, ರಾಜಶೇಖರ, ಕೆ.ನಟರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ :</strong> 7ನೇ ವೇತನ ಆಯೋಗದಿಂದ ವರದಿ ಪಡೆದು ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಸಮಿತಿಯವರು ಮಂಗಳವಾರ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಪಟ್ಟಣದ ಸರ್ಕಾರಿ ನೌಕರರ ಭವನದಿಂದ ಹೂವಿನ ಹಡಗಲಿ ರಸ್ತೆಯಲ್ಲಿರುವ ಶಾಸಕಿ ಲತಾ ಮಲ್ಲಿಕಾರ್ಜುನ್ ಅವರ ನಿವಾಸದ ವರೆಗೂ ಬೈಕ್ ರ್ಯಾಲಿ ಮೂಲಕ ತೆರಳಿದ ಸರ್ಕಾರಿ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಮನವಿ ಸಲ್ಲಿಸಿದರು.</p>.<p>ಹೊಸ ಪಿಂಚಣಿಗೆ ಒಳಪಡುವ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಕಷ್ಟಕರವಾಗುತ್ತದೆ. ಆದ್ದರಿಂದ ಎನ್.ಪಿ.ಎಸ್ ನೌಕರರಿಗೂ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಸರ್ಕಾರಿ ನೌಕರರಿಗೆ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿದರು.</p>.<p>ತಾಲ್ಲೂಕು ಅಧ್ಯಕ್ಷ ಎಸ್.ರಾಮಪ್ಪ, ರಾಜ್ಯ ಸಮಿತಿ ಸದಸ್ಯ ಬಸವರಾಜ ಸಂಗಪ್ಪನವರ್, ವೆಂಕಟೇಶ ಬಾಗಲಾರ, ಬಿ.ಎಚ್.ಚಂದ್ರಪ್ಪ, ಬಿ.ರುದ್ರಾಚಾರಿ, ಎ.ಸುಮಾ, ಬುಳ್ಳಪ್ಪ, ರಮೇಶ್, ಅತಾವುಲ್ಲಾ, ದೇವೇಂದ್ರಗೌಡ, ಗುರುಪ್ರಸಾದ್, ರಾಜಶೇಖರ, ಕೆ.ನಟರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>