ಗುರುವಾರ ಕಾಡಾ ಅಧ್ಯಕ್ಷ ತಿಪ್ಪೇರುದ್ರ ಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದ್ದಾರೆ. ರೈತರು ತಡವಾಗಿ ಭತ್ತ ನಾಟಿ ಮಾಡಿದ್ದಾರೆ. ನೀರಿನ ಅಗತ್ಯವಿದೆ. ಏ.10ರಿಂದ 20ರ ವರೆಗೆ ಆಂಧ್ರ ಪ್ರದೇಶದ ಪಾಲಿನ ನೀರು ಹರಿಸಲಾಗುತ್ತದೆ. ಈ ವೇಳೆ ಸ್ಥಳೀಯ ರೈತರ ಗದ್ದೆಗೂ ನೀರು ಹರಿಸಬೇಕೆಂದು ಆಗ್ರಹಿಸಿದ್ದಾರೆ. ಅಧಿಕಾರಿಗಳು, ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.