ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏ. 15ರ ವರೆಗೆ ನೀರು ಹರಿಸಲು ಆಗ್ರಹ

Last Updated 7 ಏಪ್ರಿಲ್ 2021, 16:39 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಎಡದಂಡೆ ಹಾಗೂ ಬಲದಂಡೆ ಕೆಳಮಟ್ಟದ ಕಾಲುವೆಗಳಿಗೆ ಏ. 15ರ ವರೆಗೆ ನೀರು ಹರಿಸುವಂತೆ ತುಂಗಭದ್ರಾ ರೈತ ಸಂಘದ ಅಧ್ಯಕ್ಷ ಪುರುಷೋತ್ತಮಗೌಡ ಹಾಗೂ ಉಪಾಧ್ಯಕ್ಷ ವೀರನಗೌಡ ಶ್ರೀಧರಗಡ್ಡೆ ಆಗ್ರಹಿಸಿದ್ದಾರೆ.

ಈ ಸಂಬಂಧ ಅವರು ತುಂಗಭದ್ರಾ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್‌ ಮಂಜಪ್ಪ ಅವರನ್ನು ಬುಧವಾರ ಭೇಟಿಯಾಗಿ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

‘ಏ. 10ರ ವರೆಗೆ ನೀರು ಹರಿಸಲು ಈಗಾಗಲೇ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ತೀರ್ಮಾನ ತೆಗೆದುಕೊಂಡಿದೆ. ಆದರೆ, ಏ. 15ರ ವರೆಗೆ ನೀರು ಹರಿಸಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಮಂಜಪ್ಪ ಅವರಿಗೆ ಮನವರಿಕೆ ಮಾಡಿಕೊಡಲಾಗಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನೀರಿನ ಲಭ್ಯತೆ ನೋಡಿಕೊಂಡು ನೀರು ಹರಿಸುವ ಭರವಸೆ ನೀಡಿದ್ದಾರೆ. ಅವರು ಕೊಟ್ಟ ಭರವಸೆಯಂತೆ ನೀರು ಹರಿಸಿದರೆ ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ರಾಯಚೂರು ಭಾಗದ ರೈತರ ಬೆಳೆ ಸಂರಕ್ಷಿಸಬಹುದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT