<p>ಹೊಸಪೇಟೆ (ವಿಜಯನಗರ): ಸಮೀಪದ ನಾಗೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗುಡಿಓಬಳಾಪುರದ ಆಶ್ರಯ ಯೋಜನೆಯ 95 ಜನ ಫಲಾನುಭವಿಗಳಿಗೆ 1991ರಲ್ಲಿ ನೀಡಿರುವ ನಿವೇಶದ ಹಕ್ಕುಪತ್ರಗಳನ್ನು ಡಿಮ್ಯಾಂಡ್ ರಿಜಿಸ್ಟ್ರ್ನಲ್ಲಿ ಸೇರಿಸುವಂತೆ ಒತ್ತಾಯಿಸಿ ಬುಧವಾರ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಫಲಾನುಭವಿಗಳು, 1991ರಲ್ಲಿ ಆಶ್ರಯ ಯೋಜನೆ ಅಡಿಯಲ್ಲಿ 95 ಜನ ಬಡ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಿದ್ದಾರೆ. ಆದರೆ ಇದುವರೆಗೂ ಪಂಚಾಯ್ತಿಯವರು ಮೂಲಸೌಕರ್ಯ ಒದಗಿಸದೇ ಹಾಗೂ ಡಿಮ್ಯಾಂಡ್ ರಿಜಿಸ್ಟ್ರ್ ಸೇರಿಸುವಂತೆ ಒತ್ತಾಯಿಸಿದರೂ ಸ್ಪಂದಿಸುತ್ತಿಲ್ಲ ಎಂದು ದೂರಿದರು.</p>.<p>ಅಲ್ಲದೆ ಹಿಂದೆ ಹಲವು ಬಾರಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿಯೂ ಸಹ ಗಮನಕ್ಕೆ ತರಲಾಗಿತ್ತು. ಜೊತೆಗೆ ಶಾಸಕ ಎಚ್.ಆರ್.ಗವಿಯಪ್ಪ ಅವರಿಗೂ ಮನವಿ ಸಲ್ಲಿಸಲಾಗಿದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಫಲಾನುಭವಿಗಳು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ (ವಿಜಯನಗರ): ಸಮೀಪದ ನಾಗೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗುಡಿಓಬಳಾಪುರದ ಆಶ್ರಯ ಯೋಜನೆಯ 95 ಜನ ಫಲಾನುಭವಿಗಳಿಗೆ 1991ರಲ್ಲಿ ನೀಡಿರುವ ನಿವೇಶದ ಹಕ್ಕುಪತ್ರಗಳನ್ನು ಡಿಮ್ಯಾಂಡ್ ರಿಜಿಸ್ಟ್ರ್ನಲ್ಲಿ ಸೇರಿಸುವಂತೆ ಒತ್ತಾಯಿಸಿ ಬುಧವಾರ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಫಲಾನುಭವಿಗಳು, 1991ರಲ್ಲಿ ಆಶ್ರಯ ಯೋಜನೆ ಅಡಿಯಲ್ಲಿ 95 ಜನ ಬಡ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಿದ್ದಾರೆ. ಆದರೆ ಇದುವರೆಗೂ ಪಂಚಾಯ್ತಿಯವರು ಮೂಲಸೌಕರ್ಯ ಒದಗಿಸದೇ ಹಾಗೂ ಡಿಮ್ಯಾಂಡ್ ರಿಜಿಸ್ಟ್ರ್ ಸೇರಿಸುವಂತೆ ಒತ್ತಾಯಿಸಿದರೂ ಸ್ಪಂದಿಸುತ್ತಿಲ್ಲ ಎಂದು ದೂರಿದರು.</p>.<p>ಅಲ್ಲದೆ ಹಿಂದೆ ಹಲವು ಬಾರಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿಯೂ ಸಹ ಗಮನಕ್ಕೆ ತರಲಾಗಿತ್ತು. ಜೊತೆಗೆ ಶಾಸಕ ಎಚ್.ಆರ್.ಗವಿಯಪ್ಪ ಅವರಿಗೂ ಮನವಿ ಸಲ್ಲಿಸಲಾಗಿದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಫಲಾನುಭವಿಗಳು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>