<p><strong>ಹೊಸಪೇಟೆ (ವಿಜಯನಗರ):</strong> ರಾಜ್ಯದಲ್ಲಿರುವ ಮಾಜಿ ದೇವದಾಸಿಯರು, ಅವರ ಮಕ್ಕಳು ಮತ್ತು ಮೊಮ್ಮಕ್ಕಳ ಸಮೀಕ್ಷೆ ನಡೆಸುವಲ್ಲಿ ಹಲವು ಕೊರತೆಗಳು ಇರುವುದು ಇದೀಗ ಗೊತ್ತಾಗಿದೆ, ಹೀಗಾಗಿ ಮುಖ್ಯಮಂತ್ರಿ ಅವರು ಮಧ್ಯಪ್ರವೇಶಿಸಿ ಸಮೀಕ್ಷೆಯಲ್ಲಿರುವ ಹಲವು ಲೋಪದೋಷಗಳನ್ನು ಸರಿಪಡಿಸಬೇಕು ಎಂದು ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಒತ್ತಾಯಿಸಿದೆ.</p><p>ಸಂಘದ ಗೌರವಾಧ್ಯಕ್ಷ ಯು.ಬಸವರಾಜ ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 1982ರ ನಂತರ ಹುಟ್ಟಿದವರನ್ನು ಸಮೀಕ್ಷೆಗೆ ಒಳಪಡಿಸುವುದಿಲ್ಲ ಎಂದು ಹೇಳುವುದು ಸರಿಯಲ್ಲ, ಎಲ್ಲರನ್ನೂ ಸಮೀಕ್ಷೆಗೆ ಒಳಪಡಿಸಲೇಬೇಕು ಎಂದರು.</p><p>2025ರ ದೇವದಾಸಿ ನಿಷೇಧ ಕಾಯ್ದೆ ಸಂಬಂಧ ಸರ್ಕಾರ ಇನ್ನೂ ಅಧಿಸೂಚನೆ ಹೊರಡಿಸಿಲ್ಲ. ಅಧಿಸೂಚನೆ ಇಲ್ಲದ ಕಾರಣ ಅಧಿಕಾರಿಗಳು ಸರ್ಕಾರದ ಆದೇಶ ಪಾಲಿಸುತ್ತಿಲ್ಲ, ಸಮೀಕ್ಷೆಯಿಂದ ಯಾರೊಬ್ಬರೂ ಹೊರಗುಳಿಯದಂತೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p><p><strong>19ರಿಂದ ಧರಣಿ:</strong> ಮಾಜಿ ದೇವದಾಸಿಯರ ಸಮೀಕ್ಷೆಯ ಲೋಪ ಸರಿಪಡಿಸಬೇಕು, ಮಾಜಿ ದೇವದಾಸಿಯರ ಪಿಂಚಣಿಯನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು, ವಿದ್ಯುತ್ ಖಾಸಗೀಕರಣ ಮತ್ತು ನರೇಗಾ ತಿದ್ದುಪಡಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ಜ.19ರಿಂದ 22ರವರೆಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗಳ ಬಳಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಬಸವರಾಜ ಎಚ್ಚರಿಸಿದರು.</p><p>ಸಂಘದ ಜಿಲ್ಲಾ ಅಧ್ಯಕ್ಷೆ ಹುಲಿಗೆಮ್ಮ, ಪ್ರಧಾನ ಕಾರ್ಯದರ್ಶಿ ಮಾಳಮ್ಮ, ಮುಖಂಡರಾದ ಕೆ.ನಾಗರತ್ನಮ್ಮ, ಎಂ.ಜಂಬಯ್ಯ ನಾಯಕ, ಸ್ವಾಮಿ, ಮಂಜುನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ರಾಜ್ಯದಲ್ಲಿರುವ ಮಾಜಿ ದೇವದಾಸಿಯರು, ಅವರ ಮಕ್ಕಳು ಮತ್ತು ಮೊಮ್ಮಕ್ಕಳ ಸಮೀಕ್ಷೆ ನಡೆಸುವಲ್ಲಿ ಹಲವು ಕೊರತೆಗಳು ಇರುವುದು ಇದೀಗ ಗೊತ್ತಾಗಿದೆ, ಹೀಗಾಗಿ ಮುಖ್ಯಮಂತ್ರಿ ಅವರು ಮಧ್ಯಪ್ರವೇಶಿಸಿ ಸಮೀಕ್ಷೆಯಲ್ಲಿರುವ ಹಲವು ಲೋಪದೋಷಗಳನ್ನು ಸರಿಪಡಿಸಬೇಕು ಎಂದು ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಒತ್ತಾಯಿಸಿದೆ.</p><p>ಸಂಘದ ಗೌರವಾಧ್ಯಕ್ಷ ಯು.ಬಸವರಾಜ ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 1982ರ ನಂತರ ಹುಟ್ಟಿದವರನ್ನು ಸಮೀಕ್ಷೆಗೆ ಒಳಪಡಿಸುವುದಿಲ್ಲ ಎಂದು ಹೇಳುವುದು ಸರಿಯಲ್ಲ, ಎಲ್ಲರನ್ನೂ ಸಮೀಕ್ಷೆಗೆ ಒಳಪಡಿಸಲೇಬೇಕು ಎಂದರು.</p><p>2025ರ ದೇವದಾಸಿ ನಿಷೇಧ ಕಾಯ್ದೆ ಸಂಬಂಧ ಸರ್ಕಾರ ಇನ್ನೂ ಅಧಿಸೂಚನೆ ಹೊರಡಿಸಿಲ್ಲ. ಅಧಿಸೂಚನೆ ಇಲ್ಲದ ಕಾರಣ ಅಧಿಕಾರಿಗಳು ಸರ್ಕಾರದ ಆದೇಶ ಪಾಲಿಸುತ್ತಿಲ್ಲ, ಸಮೀಕ್ಷೆಯಿಂದ ಯಾರೊಬ್ಬರೂ ಹೊರಗುಳಿಯದಂತೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p><p><strong>19ರಿಂದ ಧರಣಿ:</strong> ಮಾಜಿ ದೇವದಾಸಿಯರ ಸಮೀಕ್ಷೆಯ ಲೋಪ ಸರಿಪಡಿಸಬೇಕು, ಮಾಜಿ ದೇವದಾಸಿಯರ ಪಿಂಚಣಿಯನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು, ವಿದ್ಯುತ್ ಖಾಸಗೀಕರಣ ಮತ್ತು ನರೇಗಾ ತಿದ್ದುಪಡಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ಜ.19ರಿಂದ 22ರವರೆಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗಳ ಬಳಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಬಸವರಾಜ ಎಚ್ಚರಿಸಿದರು.</p><p>ಸಂಘದ ಜಿಲ್ಲಾ ಅಧ್ಯಕ್ಷೆ ಹುಲಿಗೆಮ್ಮ, ಪ್ರಧಾನ ಕಾರ್ಯದರ್ಶಿ ಮಾಳಮ್ಮ, ಮುಖಂಡರಾದ ಕೆ.ನಾಗರತ್ನಮ್ಮ, ಎಂ.ಜಂಬಯ್ಯ ನಾಯಕ, ಸ್ವಾಮಿ, ಮಂಜುನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>