<p><strong>ಹೊಸಪೇಟೆ (ವಿಜಯನಗರ):</strong> ಮಾಜಿ ದೇವದಾಸಿಯರ ಮರು ಸಮೀಕ್ಷೆ ಪೂರ್ಣಗೊಳಿಸಲು ಅ.24ರ ಗಡುವು ನೀಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ದಾಖಲಾತಿ ಸಿಗುತ್ತಿಲ್ಲ. ಅವಧಿಯನ್ನು ಡಿಸೆಂಬರ್ವರೆಗೆ ವಿಸ್ತರಿಸಬೇಕು ಎಂದು ಇಲ್ಲಿ ನಡೆದ ರಾಜ್ಯಮಟ್ಟದ ಸಮಾಲೋಚನಾ ಸಭೆಯಲ್ಲಿ ಒತ್ತಾಯಿಸಲಾಯಿತು.</p>.<p>ವಿಮುಕ್ತ ದೇವದಾಸಿ ಮಹಿಳಾ ಮತ್ತು ಮಕ್ಕಳ ವೇದಿಕೆ- ಕರ್ನಾಟಕ, ಸಖಿ ಸಂಸ್ಥೆ ಹೊಸಪೇಟೆ ಸಹಯೋಗದಲ್ಲಿ ನಡೆದ ಸಭೆಯಲ್ಲಿ ಸಮೀಕ್ಷೆ ನಡೆಯುತ್ತಿರುವ 15 ಜಿಲ್ಲೆಗಳ ಪ್ರತಿನಿಧಿಗಳು ಇದ್ದರು.</p>.<p>ಸಮೀಕ್ಷೆ ವೇಳೆ ಕೇಳುತ್ತಿರುವ ದಾಖಲೆಗಳ ವಿಚಾರದಲ್ಲಿ ಏಕರೂಪತೆ ಇಲ್ಲ. ನೆಟ್ವರ್ಕ್ ಸಮಸ್ಯೆ ಇದೆ. ಕೆಲ ಜಿಲ್ಲೆಗಳಲ್ಲಿ ಜಿಲ್ಲಾಮಟ್ಟದ ಸಮಿತಿಗೆ ಈ ಸಮೀಕ್ಷೆಯ ಬಗ್ಗೆ ಯಾವುದೇ ಮಾಹಿತಿ ತಲುಪಿಲ್ಲ ಮತ್ತು ಸಮೀಕ್ಷೆಯ ಬಗ್ಗೆ ಸಭೆಯನ್ನು ಕೂಡಾ ಮಾಡಿಲ್ಲ ಎಂದು ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ ವಿಶ್ವವಿದ್ಯಾಲಯದ (ಎನ್ಎಲ್ಎಸ್ಯು) ಪ್ರೊ.ಆರ್.ವಿ.ಚಂದ್ರಶೇಖರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸಮೀಕ್ಷಕರಿಗೆ ಸಮಗ್ರ ತರಬೇತಿ ನೀಡಬೇಕು. ಹೀಗಾಗಿ ಗಡುವು ವಿಸ್ತರಿಸಿ ಎಲ್ಲ ಮಾಜಿ ದೇವದಾಸಿಯರ ಕುಟುಂಬಗಳ ಸಮೀಕ್ಷೆ ಸಮಗ್ರವಾಗಿ ಆಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಮಾಜಿ ದೇವದಾಸಿಯರ ಮರು ಸಮೀಕ್ಷೆ ಪೂರ್ಣಗೊಳಿಸಲು ಅ.24ರ ಗಡುವು ನೀಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ದಾಖಲಾತಿ ಸಿಗುತ್ತಿಲ್ಲ. ಅವಧಿಯನ್ನು ಡಿಸೆಂಬರ್ವರೆಗೆ ವಿಸ್ತರಿಸಬೇಕು ಎಂದು ಇಲ್ಲಿ ನಡೆದ ರಾಜ್ಯಮಟ್ಟದ ಸಮಾಲೋಚನಾ ಸಭೆಯಲ್ಲಿ ಒತ್ತಾಯಿಸಲಾಯಿತು.</p>.<p>ವಿಮುಕ್ತ ದೇವದಾಸಿ ಮಹಿಳಾ ಮತ್ತು ಮಕ್ಕಳ ವೇದಿಕೆ- ಕರ್ನಾಟಕ, ಸಖಿ ಸಂಸ್ಥೆ ಹೊಸಪೇಟೆ ಸಹಯೋಗದಲ್ಲಿ ನಡೆದ ಸಭೆಯಲ್ಲಿ ಸಮೀಕ್ಷೆ ನಡೆಯುತ್ತಿರುವ 15 ಜಿಲ್ಲೆಗಳ ಪ್ರತಿನಿಧಿಗಳು ಇದ್ದರು.</p>.<p>ಸಮೀಕ್ಷೆ ವೇಳೆ ಕೇಳುತ್ತಿರುವ ದಾಖಲೆಗಳ ವಿಚಾರದಲ್ಲಿ ಏಕರೂಪತೆ ಇಲ್ಲ. ನೆಟ್ವರ್ಕ್ ಸಮಸ್ಯೆ ಇದೆ. ಕೆಲ ಜಿಲ್ಲೆಗಳಲ್ಲಿ ಜಿಲ್ಲಾಮಟ್ಟದ ಸಮಿತಿಗೆ ಈ ಸಮೀಕ್ಷೆಯ ಬಗ್ಗೆ ಯಾವುದೇ ಮಾಹಿತಿ ತಲುಪಿಲ್ಲ ಮತ್ತು ಸಮೀಕ್ಷೆಯ ಬಗ್ಗೆ ಸಭೆಯನ್ನು ಕೂಡಾ ಮಾಡಿಲ್ಲ ಎಂದು ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ ವಿಶ್ವವಿದ್ಯಾಲಯದ (ಎನ್ಎಲ್ಎಸ್ಯು) ಪ್ರೊ.ಆರ್.ವಿ.ಚಂದ್ರಶೇಖರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸಮೀಕ್ಷಕರಿಗೆ ಸಮಗ್ರ ತರಬೇತಿ ನೀಡಬೇಕು. ಹೀಗಾಗಿ ಗಡುವು ವಿಸ್ತರಿಸಿ ಎಲ್ಲ ಮಾಜಿ ದೇವದಾಸಿಯರ ಕುಟುಂಬಗಳ ಸಮೀಕ್ಷೆ ಸಮಗ್ರವಾಗಿ ಆಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>