<p><strong>ಹೊಸಪೇಟೆ (ವಿಜಯನಗರ):</strong> ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಗುರಿ ನಮ್ಮದು, ಅದರ ಸದುಪಯೋಗ ಪಡೆದು ಮುಖ್ಯವಾಹಿನಿಗೆ ಬರುವ ಛಲ ಬುಡಕಟ್ಟು ಸಮುದಾಯಗಳದ್ದಾಗಲಿ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದರು.</p>.<p>ತಮ್ಮ ಕಚೇರಿಯಲ್ಲಿ ಬುಧವಾರ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ್ ಅಭಿಯಾನ ಕಾರ್ಯಕ್ರಮದಡಿ ಧರ್ತಿ ಆಬಾ ಅಭಿಯಾನ ಜಾಗೃತಿ ಮತ್ತು ಪ್ರಯೋಜನಗಳ ಶಿಬಿರ ಅನುಷ್ಠಾನದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆಯಲ್ಲಿ ಹೆಚ್ಚು ಪರಿಶಿಷ್ಟ ವರ್ಗಗಳ ಸಮುದಾಯದ ಜನರು ವಾಸಿಸುವ ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಅಭಿಯಾನದ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ಜೂನ್ 16ರಿಂದ 30ರವರೆಗೆ ವಿವಿಧ ಗ್ರಾಮಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಪ್ರಚಾರದ ವಾಹನಗಳ ಮೂಲಕ ಪ್ರಚಾರ ಮಾಡಲಾಗುವುದು. ಅಯಾ ಹಳ್ಳಿಗಳಲ್ಲಿಯೇ ಅರ್ಜಿಗಳನ್ನು ಸ್ವೀಕರಿಸಲು ನಮ್ಮ ಅಧಿಕಾರಿಗಳು ನಿಗದಿತ ದಿನಾಂಕಗಳಲ್ಲಿ ಲಭ್ಯವಿರಲಿದ್ದಾರೆ’ ಎಂದರು.</p>.<p>ಬುಡಕಟ್ಟು ಸಮುದಾಯದವರಿಗೆ ಒದಗಿಸಬೇಕಾದ ಮೂಲಭೂತ ಸೌಕರ್ಯಗಳ ಕುರಿತು ಜಾಗೃತಿ ಮೂಡಿಸುವುದು ಮತ್ತು ತಪಾಸಣೆ ಸೇರಿದಂತೆ ವಿವಿಧ ಯೋಜನೆಗಳ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.</p>.<p><strong>ಶಿಬಿರಗಳ ವಿವರ:</strong> 16ರಂದು ಹೊಸಪೇಟೆ ತಾಲ್ಲೂಕಿನ ಚಿಲಕನಹಟ್ಟಿ, ಹೊಸೂರು, ನರಸಾಪುರ ಗ್ರಾಮದಲ್ಲಿ, 17ರಂದು ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ನಾರಾಯಣದೇವರಕೆರೆ ಗ್ರಾಮದಲ್ಲಿ, 18ರಂದು ಕೂಡ್ಲಿಗಿ ತಾಲ್ಲೂಕಿನ ಜರ್ಮಲಿ, ಸಿಡಿಗಲ್ಲು, ಹುಲಿಕುಂಟ, ಹುರಡಿಹಳ್ಳಿ ಗ್ರಾಮಗಳಲ್ಲಿ, 19ರಂದು ಹುರುಳಿಹಾಳು, ಕುಮುತಿ, ಅಡವಿಸೂರನಹಳ್ಳಿ, ನರಸಿಂಹಗಿರಿ, 20ರಂದು ರ್ರನಿಂಗನಹಳ್ಳಿ, ಗಂಡುಬೊಮ್ಮನಹಳ್ಳಿ, ಮೀನುಕೆರೆ, ಚಿರತುಗುಂಡು, 21ರಂದು ಪಾಲಯನಕೋಟೆ, ಜಮ್ಮೋಬನಹಳ್ಳಿ, ಲದಹಳ್ಳಿ, 22ರಂದು ತಿಪ್ಪೆಹಳ್ಳಿ, ನಾಗೇನಹಳ್ಳಿ, 23ರಂದು ಹರಪನಹಳ್ಳಿ ತಾಲ್ಲೂಕಿನ ಆನಂತಹಳ್ಳಿ, ನಿಚ್ಚವನಹಳ್ಳಿ, 24ರಂದು ಕೂಮಾರನಹಳ್ಳಿ, ಕಂಬತ್ರಹಳ್ಳಿ ಗ್ರಾಮಗಳಲ್ಲಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.</p>.<p>ಸಭೆಯಲ್ಲಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶ್ವೇತಾ, ಅಹಾರ ಇಲಾಖೆ ಉಪನಿರ್ದೇಶಕ ರಿಯಾಜ್, ಆಯುಷ್ ಇಲಾಖೆಯ ಡಾ.ಮುನಿವಾಸುದೇವ ರೆಡ್ಡಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಗುರಿ ನಮ್ಮದು, ಅದರ ಸದುಪಯೋಗ ಪಡೆದು ಮುಖ್ಯವಾಹಿನಿಗೆ ಬರುವ ಛಲ ಬುಡಕಟ್ಟು ಸಮುದಾಯಗಳದ್ದಾಗಲಿ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದರು.</p>.<p>ತಮ್ಮ ಕಚೇರಿಯಲ್ಲಿ ಬುಧವಾರ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ್ ಅಭಿಯಾನ ಕಾರ್ಯಕ್ರಮದಡಿ ಧರ್ತಿ ಆಬಾ ಅಭಿಯಾನ ಜಾಗೃತಿ ಮತ್ತು ಪ್ರಯೋಜನಗಳ ಶಿಬಿರ ಅನುಷ್ಠಾನದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆಯಲ್ಲಿ ಹೆಚ್ಚು ಪರಿಶಿಷ್ಟ ವರ್ಗಗಳ ಸಮುದಾಯದ ಜನರು ವಾಸಿಸುವ ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಅಭಿಯಾನದ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ಜೂನ್ 16ರಿಂದ 30ರವರೆಗೆ ವಿವಿಧ ಗ್ರಾಮಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಪ್ರಚಾರದ ವಾಹನಗಳ ಮೂಲಕ ಪ್ರಚಾರ ಮಾಡಲಾಗುವುದು. ಅಯಾ ಹಳ್ಳಿಗಳಲ್ಲಿಯೇ ಅರ್ಜಿಗಳನ್ನು ಸ್ವೀಕರಿಸಲು ನಮ್ಮ ಅಧಿಕಾರಿಗಳು ನಿಗದಿತ ದಿನಾಂಕಗಳಲ್ಲಿ ಲಭ್ಯವಿರಲಿದ್ದಾರೆ’ ಎಂದರು.</p>.<p>ಬುಡಕಟ್ಟು ಸಮುದಾಯದವರಿಗೆ ಒದಗಿಸಬೇಕಾದ ಮೂಲಭೂತ ಸೌಕರ್ಯಗಳ ಕುರಿತು ಜಾಗೃತಿ ಮೂಡಿಸುವುದು ಮತ್ತು ತಪಾಸಣೆ ಸೇರಿದಂತೆ ವಿವಿಧ ಯೋಜನೆಗಳ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.</p>.<p><strong>ಶಿಬಿರಗಳ ವಿವರ:</strong> 16ರಂದು ಹೊಸಪೇಟೆ ತಾಲ್ಲೂಕಿನ ಚಿಲಕನಹಟ್ಟಿ, ಹೊಸೂರು, ನರಸಾಪುರ ಗ್ರಾಮದಲ್ಲಿ, 17ರಂದು ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ನಾರಾಯಣದೇವರಕೆರೆ ಗ್ರಾಮದಲ್ಲಿ, 18ರಂದು ಕೂಡ್ಲಿಗಿ ತಾಲ್ಲೂಕಿನ ಜರ್ಮಲಿ, ಸಿಡಿಗಲ್ಲು, ಹುಲಿಕುಂಟ, ಹುರಡಿಹಳ್ಳಿ ಗ್ರಾಮಗಳಲ್ಲಿ, 19ರಂದು ಹುರುಳಿಹಾಳು, ಕುಮುತಿ, ಅಡವಿಸೂರನಹಳ್ಳಿ, ನರಸಿಂಹಗಿರಿ, 20ರಂದು ರ್ರನಿಂಗನಹಳ್ಳಿ, ಗಂಡುಬೊಮ್ಮನಹಳ್ಳಿ, ಮೀನುಕೆರೆ, ಚಿರತುಗುಂಡು, 21ರಂದು ಪಾಲಯನಕೋಟೆ, ಜಮ್ಮೋಬನಹಳ್ಳಿ, ಲದಹಳ್ಳಿ, 22ರಂದು ತಿಪ್ಪೆಹಳ್ಳಿ, ನಾಗೇನಹಳ್ಳಿ, 23ರಂದು ಹರಪನಹಳ್ಳಿ ತಾಲ್ಲೂಕಿನ ಆನಂತಹಳ್ಳಿ, ನಿಚ್ಚವನಹಳ್ಳಿ, 24ರಂದು ಕೂಮಾರನಹಳ್ಳಿ, ಕಂಬತ್ರಹಳ್ಳಿ ಗ್ರಾಮಗಳಲ್ಲಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.</p>.<p>ಸಭೆಯಲ್ಲಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶ್ವೇತಾ, ಅಹಾರ ಇಲಾಖೆ ಉಪನಿರ್ದೇಶಕ ರಿಯಾಜ್, ಆಯುಷ್ ಇಲಾಖೆಯ ಡಾ.ಮುನಿವಾಸುದೇವ ರೆಡ್ಡಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>