<p><strong>ಹಗರಿಬೊಮ್ಮನಹಳ್ಳಿ: ‘</strong>ರೈತರು ಮತ್ತು ಸಾರ್ವಜನಿಕರಿಗೆ ಕಂದಾಯ ಇಲಾಖೆಯ ಹಳೆಯ ದಾಖಲೆಗಳನ್ನು ಪಡೆಯುವಲ್ಲಿ ಉಂಟಾಗುವ ವಿಳಂಬ ತಡೆಯಲು ಸರ್ಕಾರ ದಾಖಲೆಗಳ ಡಿಜಟಲೀಕರಣ ಮಾಡಿದೆ’ ಎಂದು ಶಾಸಕ ಕೆ.ನೇಮರಾಜನಾಯ್ಕ ಹೇಳಿದರು.</p>.<p>ಪಟ್ಟಣದ ಆಡಳಿತ ಸೌಧದಲ್ಲಿ ಭೂ ದಾಖಲೆಗಳ ಡಿಜಟಲೀಕರಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಹಳೆಯ ದಾಖಲೆಗಳನ್ನು ಸಂಗ್ರಹಿಸಿ ಬಹುದಿನಗಳ ಕಾಲ ರಕ್ಷಿಸಲು ತೊಂದರೆಯಾಗುತ್ತಿತ್ತು. ಕೆಲವು ದಿನಗಳ ಬಳಿಕ ಹಾಳಾಗುತ್ತಿದ್ದವು. ಈಗ ಡಿಜಟಲೀಕರಣದ ಸ್ಪರ್ಶದಿಂದ ಯಾವುದೇ ದಾಖಲೆಗಳಿಗೆ ಹಾನಿಯಾಗುವುದಿಲ್ಲ’ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಆರ್.ಕವಿತಾ ಮಾತನಾಡಿ, ‘ಭೂ ದಾಖಲೆಗಳನ್ನು ಕಂಪ್ಯೂಟರ್ ಸ್ಕ್ಯಾನ್ ಮಾಡಿ ಶಾಶ್ವತವಾಗಿ ಮತ್ತು ಸುಲಭವಾಗಿ ರೈತರಿಗೆ ದೊರೆಯುತ್ತದೆ. ಸಾರ್ವಜನಿಕರು, ರೈತರು ಇನ್ನುಮುಂದೆ ಕಡಿಮೆ ಅವಧಿಯಲ್ಲಿಯೇ ಅಗತ್ಯ ದಾಖಲೆಗಳನ್ನು ಪಡೆಯಬಹುದು. ಡಿಜಿಟಿಲ್ನಿಂದಾಗಿ ಭೂ ಒಡೆತನದ ದಾಖಲೆಗಳು ರೈತರ ಬಳಿ ಶಾಶ್ವತವಾಗಿ ಉಳಿಯುತ್ತವೆ’ ಎಂದರು.</p>.<p>ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ವೈ.ಮಲ್ಲಿಕಾರ್ಜುನ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಸೂರ್ಯಬಾಬು, ನಾಣ್ಯಾಪುರ ಕೃಷ್ಣಮೂರ್ತಿ, ಉಪ ತಹಶೀಲ್ದಾರ್ ಶಿವಕುಮಾರಗೌಡ, ಗ್ರಾಮ ಆಡಳಿತಾಧಿಕಾರಿಗಳ ಸಂಘದ ದೇವೇಂದ್ರಪ್ಪ, ಚೇತನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ: ‘</strong>ರೈತರು ಮತ್ತು ಸಾರ್ವಜನಿಕರಿಗೆ ಕಂದಾಯ ಇಲಾಖೆಯ ಹಳೆಯ ದಾಖಲೆಗಳನ್ನು ಪಡೆಯುವಲ್ಲಿ ಉಂಟಾಗುವ ವಿಳಂಬ ತಡೆಯಲು ಸರ್ಕಾರ ದಾಖಲೆಗಳ ಡಿಜಟಲೀಕರಣ ಮಾಡಿದೆ’ ಎಂದು ಶಾಸಕ ಕೆ.ನೇಮರಾಜನಾಯ್ಕ ಹೇಳಿದರು.</p>.<p>ಪಟ್ಟಣದ ಆಡಳಿತ ಸೌಧದಲ್ಲಿ ಭೂ ದಾಖಲೆಗಳ ಡಿಜಟಲೀಕರಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಹಳೆಯ ದಾಖಲೆಗಳನ್ನು ಸಂಗ್ರಹಿಸಿ ಬಹುದಿನಗಳ ಕಾಲ ರಕ್ಷಿಸಲು ತೊಂದರೆಯಾಗುತ್ತಿತ್ತು. ಕೆಲವು ದಿನಗಳ ಬಳಿಕ ಹಾಳಾಗುತ್ತಿದ್ದವು. ಈಗ ಡಿಜಟಲೀಕರಣದ ಸ್ಪರ್ಶದಿಂದ ಯಾವುದೇ ದಾಖಲೆಗಳಿಗೆ ಹಾನಿಯಾಗುವುದಿಲ್ಲ’ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಆರ್.ಕವಿತಾ ಮಾತನಾಡಿ, ‘ಭೂ ದಾಖಲೆಗಳನ್ನು ಕಂಪ್ಯೂಟರ್ ಸ್ಕ್ಯಾನ್ ಮಾಡಿ ಶಾಶ್ವತವಾಗಿ ಮತ್ತು ಸುಲಭವಾಗಿ ರೈತರಿಗೆ ದೊರೆಯುತ್ತದೆ. ಸಾರ್ವಜನಿಕರು, ರೈತರು ಇನ್ನುಮುಂದೆ ಕಡಿಮೆ ಅವಧಿಯಲ್ಲಿಯೇ ಅಗತ್ಯ ದಾಖಲೆಗಳನ್ನು ಪಡೆಯಬಹುದು. ಡಿಜಿಟಿಲ್ನಿಂದಾಗಿ ಭೂ ಒಡೆತನದ ದಾಖಲೆಗಳು ರೈತರ ಬಳಿ ಶಾಶ್ವತವಾಗಿ ಉಳಿಯುತ್ತವೆ’ ಎಂದರು.</p>.<p>ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ವೈ.ಮಲ್ಲಿಕಾರ್ಜುನ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಸೂರ್ಯಬಾಬು, ನಾಣ್ಯಾಪುರ ಕೃಷ್ಣಮೂರ್ತಿ, ಉಪ ತಹಶೀಲ್ದಾರ್ ಶಿವಕುಮಾರಗೌಡ, ಗ್ರಾಮ ಆಡಳಿತಾಧಿಕಾರಿಗಳ ಸಂಘದ ದೇವೇಂದ್ರಪ್ಪ, ಚೇತನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>