ದೇಶದಾದ್ಯಂತ ನೆಲೆಸಿರುವ ಮುಸ್ಲಿಮರ ಪ್ರಾಣ, ಅವರ ಧಾರ್ಮಿಕ ಸ್ಥಳಗಳಿಗೆ ಸೂಕ್ತ ರಕ್ಷಣೆ ಕೊಡಬೇಕು. ಪ್ರವಾದಿ ಮೊಹಮ್ಮದ್ ಪೈಗಂಬರ್, ಕುರಾನ್ ಬಗ್ಗೆ ಅವಹೇಳನಕಾರಿ ಮಾತನಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ನರಸಿಂಗಾನಂದ, ವಸಿಂ ರಿಜ್ವಿ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಹಕ್ಕೊತ್ತಾಯ ಮಾಡಿದರು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.