ಸ್ವಾಮೀಜಿಯವರು ಜಿಲ್ಲೆಯ ವಿವಿಧೆಡೆ ಸಾರ್ವಜನಿಕರಿಗೆ ಉಚಿತವಾಗಿ ಔಷಧ ವಿತರಿಸುತ್ತಿದ್ದಾರೆ. ಇತ್ತೀಚೆಗೆ ಕಮಲಾಪುರದಲ್ಲೂ ವಿತರಿಸಿದ್ದರು. ಆದರೆ, ವಿಷಯ ಬೆಳಕಿಗೆ ಬರುತ್ತಿದ್ದಂತೆ ಜಿಲ್ಲಾಡಳಿತ ಅದಕ್ಕೆ ತಡೆ ಒಡ್ಡಿತ್ತು. ಸರ್ಕಾರದಿಂದ ಅನುಮತಿ ಪಡೆಯದ ಕಾರಣ ಔಷಧ ವಿತರಣೆಗೆ ಅವಕಾಶ ಕಲ್ಪಿಸುತ್ತಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ಮಧ್ಯೆ ಸ್ವಾಮೀಜಿ ಸಿ.ಎಂ.ಗೆ ಪತ್ರ ಬರೆದಿದ್ದಾರೆ.