ವಿವಿಧ ಗಣೇಶ ಮಂಡಳಿಯವರು ಅಲಂಕರಿಸಿದ ವಾಹನದಲ್ಲಿ ಗಣೇಶನ ಮೂರ್ತಿಗಳನ್ನು ಇರಿಸಿ, ಡಿ.ಜೆ ಹಾಕಿ ಅದರ ಮುಂದೆ ಯುವಕರು ಮೈಮರೆತು ಕುಣಿದರು. ಮೂರಂಗಡಿ ವೃತ್ತ, ಬಸ್ ನಿಲ್ದಾಣ ರಸ್ತೆ ಮೂಲಕ ಮೆರವಣಿಗೆಯಲ್ಲಿ ಹಾದು ರೈಲು ನಿಲ್ದಾಣ ರಸ್ತೆಯ ತುಂಗಭದ್ರಾ ಕೆಳಮಟ್ಟದ ಕಾಲುವೆಯಲ್ಲಿ ಮೂರ್ತಿಗಳನ್ನು ಕ್ರೇನ್ ಸಹಾಯದಿಂದ ಒಂದೊಂದಾಗಿ ವಿಸರ್ಜಿಸಿದರು. ಮೆರವಣಿಗೆ ಕಣ್ತುಂಬಿಕೊಳ್ಳಲು ನೂರಾರು ಜನ ಸೇರಿದ್ದಾರೆ.