<p><strong>ಹೊಸಪೇಟೆ (ವಿಜಯನಗರ):</strong> ನಗರದಲ್ಲಿ ಸದ್ಯ 200 ಬೆಡ್ ಆಸ್ಪತ್ರೆ ಕಾರ್ಯ ನಡೆಯುತ್ತಿದೆ. ಆದರೆ ಬೇಡಿಕೆ ಹಿನ್ನೆಲೆಯಲ್ಲಿ ಇದನ್ನು 400 ಬೆಡ್ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.</p><p> ಇಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು ಈ ಸೂಚನೆ ನೀಡಿದರು.</p><p><strong>ಗ್ರಾಮೀಣಾಭಿವೃದ್ಧಿ ಇಲಾಖೆ:</strong> ನರೇಗಾದಲ್ಲಿ ಸಮಯಕ್ಕೆ ಸರಿಯಾಗಿ ಮಾನವ ದಿನಗಳ ಕೂಲಿ ಹಣ ಪಾವತಿಯಾಗಬೇಕು. ಅನಗತ್ಯ ವಿಳಂಬ ಆಗಬಾರದು ಎನ್ನುವ ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.</p><p>ನರೇಗಾದಲ್ಲಿ ಅಂಗನವಾಡಿ ಕಟ್ಟಡಗಳು, ಶಾಲೆ ಕೊಠಡಿಗಳು, ಕಾಂಪೌಂಡ್ ಬೇಡಿಕೆಗಳನ್ನು ಈಡೇರುಸಬೇಕು. ಇದರ ಜತೆಗೆ ಊಟದ ಗುಣಮಟ್ಟ , ಅಡುಗೆ ಕೋಣೆಗಳು ಮತ್ತು ಶೌಚಾಲಯಗಳ ನಿರ್ಮಾಣಕ್ಕೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಪ್ರಮಾಣಕ್ಕೆ ತಕ್ಕಂತೆ ಸವಲತ್ತುಗಳನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.</p><p>ಸಿಇಒ ಹೊಣೆ: ಕಲುಶಿತ ನೀರು ಕುಡಿದ ಜನರ ಆರೋಗ್ಯ ಮತ್ತು ಜೀವಕ್ಕೆ ತೊಂದರೆ ಆದರೆ ಅದಕ್ಕೆ ಜಿಲ್ಲಾ ಪಂಚಾಯ್ತಿ ಸಿಇಒ ಗಳೇ ಹೊಣೆ ಎಂದು ಸಿಎಂ ಎಚ್ಚರಿಸಿದರು. </p><p>ಜಿಲ್ಲೆಯಲ್ಲಿ ಹಿಂದಿನ ಸರ್ಕಾರ ಈ ಭಾಗಕ್ಕೆ ಒಂದೂ ಮನೆ ಕೊಟ್ಟಿಲ್ಲ. ನಾವು ₹500 ಕೋಟಿ ಕೊಟ್ಟ ಬಳಿಕ 1,500 ಮನೆಗಳನ್ನು ಪೂರ್ಣಗೊಳಿಸಿ ಜನರಿಗೆ ವಿತರಿಸಿದ್ದೇವೆ. ಬಾಕಿ 1,600 ಕ್ಕೂ ಅಧಿಕ ಮನೆಗಳನ್ನು ಸ್ಲಂ ಬೋರ್ಡ್ನಿಂದ ಪೂರ್ಣಗೊಳಿಸಿ ಜನರಿಗೆ ವಿತರಿಸುತ್ತೇವೆ. ಒಟ್ಟು ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮನೆಗಳನ್ನು ಈ ವರ್ಷದೊಳಗೆ ವಿತರಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು. </p><p>ಈಗಾಗಲೇ ಜಿಲ್ಲೆಯಲ್ಲಿ 41 ಕೆರೆಗಳನ್ನು ತುಂಬಿಸಿ ಚಾಲನೆ ನೀಡಲಾಗಿದೆ. ಈ ಮಳೆಗಾಲದಲ್ಲಿ ಬಾಕಿ ಇರುವ 9 ಕೆರೆಗಳನ್ನು ತುಂಬಿಸಿ ಲೋಕಾರ್ಪಣೆ ಮಾಡಲು ಸೂಚಿಸಿದ್ದೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ನಗರದಲ್ಲಿ ಸದ್ಯ 200 ಬೆಡ್ ಆಸ್ಪತ್ರೆ ಕಾರ್ಯ ನಡೆಯುತ್ತಿದೆ. ಆದರೆ ಬೇಡಿಕೆ ಹಿನ್ನೆಲೆಯಲ್ಲಿ ಇದನ್ನು 400 ಬೆಡ್ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.</p><p> ಇಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು ಈ ಸೂಚನೆ ನೀಡಿದರು.</p><p><strong>ಗ್ರಾಮೀಣಾಭಿವೃದ್ಧಿ ಇಲಾಖೆ:</strong> ನರೇಗಾದಲ್ಲಿ ಸಮಯಕ್ಕೆ ಸರಿಯಾಗಿ ಮಾನವ ದಿನಗಳ ಕೂಲಿ ಹಣ ಪಾವತಿಯಾಗಬೇಕು. ಅನಗತ್ಯ ವಿಳಂಬ ಆಗಬಾರದು ಎನ್ನುವ ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.</p><p>ನರೇಗಾದಲ್ಲಿ ಅಂಗನವಾಡಿ ಕಟ್ಟಡಗಳು, ಶಾಲೆ ಕೊಠಡಿಗಳು, ಕಾಂಪೌಂಡ್ ಬೇಡಿಕೆಗಳನ್ನು ಈಡೇರುಸಬೇಕು. ಇದರ ಜತೆಗೆ ಊಟದ ಗುಣಮಟ್ಟ , ಅಡುಗೆ ಕೋಣೆಗಳು ಮತ್ತು ಶೌಚಾಲಯಗಳ ನಿರ್ಮಾಣಕ್ಕೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಪ್ರಮಾಣಕ್ಕೆ ತಕ್ಕಂತೆ ಸವಲತ್ತುಗಳನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.</p><p>ಸಿಇಒ ಹೊಣೆ: ಕಲುಶಿತ ನೀರು ಕುಡಿದ ಜನರ ಆರೋಗ್ಯ ಮತ್ತು ಜೀವಕ್ಕೆ ತೊಂದರೆ ಆದರೆ ಅದಕ್ಕೆ ಜಿಲ್ಲಾ ಪಂಚಾಯ್ತಿ ಸಿಇಒ ಗಳೇ ಹೊಣೆ ಎಂದು ಸಿಎಂ ಎಚ್ಚರಿಸಿದರು. </p><p>ಜಿಲ್ಲೆಯಲ್ಲಿ ಹಿಂದಿನ ಸರ್ಕಾರ ಈ ಭಾಗಕ್ಕೆ ಒಂದೂ ಮನೆ ಕೊಟ್ಟಿಲ್ಲ. ನಾವು ₹500 ಕೋಟಿ ಕೊಟ್ಟ ಬಳಿಕ 1,500 ಮನೆಗಳನ್ನು ಪೂರ್ಣಗೊಳಿಸಿ ಜನರಿಗೆ ವಿತರಿಸಿದ್ದೇವೆ. ಬಾಕಿ 1,600 ಕ್ಕೂ ಅಧಿಕ ಮನೆಗಳನ್ನು ಸ್ಲಂ ಬೋರ್ಡ್ನಿಂದ ಪೂರ್ಣಗೊಳಿಸಿ ಜನರಿಗೆ ವಿತರಿಸುತ್ತೇವೆ. ಒಟ್ಟು ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮನೆಗಳನ್ನು ಈ ವರ್ಷದೊಳಗೆ ವಿತರಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು. </p><p>ಈಗಾಗಲೇ ಜಿಲ್ಲೆಯಲ್ಲಿ 41 ಕೆರೆಗಳನ್ನು ತುಂಬಿಸಿ ಚಾಲನೆ ನೀಡಲಾಗಿದೆ. ಈ ಮಳೆಗಾಲದಲ್ಲಿ ಬಾಕಿ ಇರುವ 9 ಕೆರೆಗಳನ್ನು ತುಂಬಿಸಿ ಲೋಕಾರ್ಪಣೆ ಮಾಡಲು ಸೂಚಿಸಿದ್ದೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>