ಹೊಸಪೇಟೆ: ಸರ್ಕಾರಿ ಆಸ್ಪತ್ರೆ ವೈದ್ಯರ ಸನ್ಮಾನ

ಹೊಸಪೇಟೆ (ವಿಜಯನಗರ): ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಜನನಿ ಮಹಿಳಾ ಸಬಲೀಕರಣ ಸಮಿತಿಯಿಂದ ಗುರುವಾರ ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆ ವೈದ್ಯರನ್ನು ಸನ್ಮಾನಿಸಲಾಯಿತು.
ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಭಾಸ್ಕರ್, ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಲೀಂ ಸೇರಿದಂತೆ 15 ವೈದ್ಯರನ್ನು ಸತ್ಕರಿಸಲಾಯಿತು.
ಕೋವಿಡ್ ಕೆಲಸದ ವೇಳೆ ಮೃತಪಟ್ಟ ವೈದ್ಯರಿಗೆ ಇದೇ ವೇಳೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜನನಿ ಸಮಿತಿಯ ಅಧ್ಯಕ್ಷೆ ನಾಗವೇಣಿ ಹಂಪಿ, ಪ್ರಧಾನ ಕಾರ್ಯದರ್ಶಿ ಹುಲಿಗೆಮ್ಮ, ಗೌರವ ಅಧ್ಯಕ್ಷೆ ರೇಖಾರಾಣಿ, ಉಪಾಧ್ಯಕ್ಷೆ ಗೀತಾ ಶಂಕರ್, ರೋಫಿಯಾ, ಕಾರ್ಯದರ್ಶಿ ರಾಜೇಶ್ವರಿ, ಸಂಚಾಲಕಿ ಸ್ವಾತಿ ಸಿಂಗ್, ಯುವ ಮುಖಂಡ ಸಂದೀಪ್ ಸಿಂಗ್, ಎನ್.ವೆಂಕಟೇಶ್, ಪ್ರಕಾಶ್ ಗುಡಿ, ಬಷೀರ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.