<p><strong>ಕೊಟ್ಟೂರು:</strong> ಕಂದಾಯ ಇಲಾಖೆ ಹೆಚ್ಚಿನ ಜನಸಂಪರ್ಕ ಹೊಂದಿರುವ ಇಲಾಖೆಯಾಗಿದ್ದು, ಎಲ್ಲಾ ಇಲಾಖೆಗಳಿಗೂ ಮಾತೃ ಇಲಾಖೆಯಾಗಿದೆ ಎಂದು ಶಾಸಕ ಕೆ.ನೇಮರಾಜನಾಯ್ಕ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಂದಾಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ‘ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಕಚೇರಿಗೆ ಬಂದಾಗ ಸೌಜನ್ಯದಿಂದ ವರ್ತಿಸಿ, ಅಲೆದಾಡಿಸದೆ ಅವರ ಕೆಲಸಗಳನ್ನು ಮಾಡಿಕೊಡಿ’ ಎಂದರು.</p>.<p>ಮುಖಂಡರಾದ ಎಂ.ಎಂ.ಜೆ. ಹರ್ಷವರ್ಧನ್, ಮೃತ್ಯುಂಜಯ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಿ.ಸಿದ್ಧಯ್ಯ, ತಹಶೀಲ್ದಾರ್ ಜಿ.ಕೆ. ಅಮರೀಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆನಂದಕುಮಾರ್, ಭೂಮಾಪನ ಇಲಾಖಾಧಿಕಾರಿ ವಿಜಯಕುಮಾರ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಯೋಗೀಶ್ವರ ದಿನ್ನೆ, ಗ್ರೇಡ್ 2 ತಹಶೀಲ್ದಾರ್ ಎಂ.ಪ್ರತಿಭಾ, ದ್ಯಾವಮ್ಮ, ಕೊಟ್ರಮ್ಮ, ಸಿ.ಮ.ಗುರುಬಸವರಾಜ್ ಪಾಲ್ಗೊಂಡಿದ್ದರು.</p>.<p>ನಿವೃತ್ತರಾದ ಉಪತಹಶೀಲ್ದಾರ್ ಕೆ.ನಾಗರಾಜ್ ಹಾಗೂ ಶಿರಸ್ತೇದಾರ ಲೀಲಾ ಅವರನ್ನು ಅಭಿನಂದಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು:</strong> ಕಂದಾಯ ಇಲಾಖೆ ಹೆಚ್ಚಿನ ಜನಸಂಪರ್ಕ ಹೊಂದಿರುವ ಇಲಾಖೆಯಾಗಿದ್ದು, ಎಲ್ಲಾ ಇಲಾಖೆಗಳಿಗೂ ಮಾತೃ ಇಲಾಖೆಯಾಗಿದೆ ಎಂದು ಶಾಸಕ ಕೆ.ನೇಮರಾಜನಾಯ್ಕ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಂದಾಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ‘ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಕಚೇರಿಗೆ ಬಂದಾಗ ಸೌಜನ್ಯದಿಂದ ವರ್ತಿಸಿ, ಅಲೆದಾಡಿಸದೆ ಅವರ ಕೆಲಸಗಳನ್ನು ಮಾಡಿಕೊಡಿ’ ಎಂದರು.</p>.<p>ಮುಖಂಡರಾದ ಎಂ.ಎಂ.ಜೆ. ಹರ್ಷವರ್ಧನ್, ಮೃತ್ಯುಂಜಯ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಿ.ಸಿದ್ಧಯ್ಯ, ತಹಶೀಲ್ದಾರ್ ಜಿ.ಕೆ. ಅಮರೀಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆನಂದಕುಮಾರ್, ಭೂಮಾಪನ ಇಲಾಖಾಧಿಕಾರಿ ವಿಜಯಕುಮಾರ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಯೋಗೀಶ್ವರ ದಿನ್ನೆ, ಗ್ರೇಡ್ 2 ತಹಶೀಲ್ದಾರ್ ಎಂ.ಪ್ರತಿಭಾ, ದ್ಯಾವಮ್ಮ, ಕೊಟ್ರಮ್ಮ, ಸಿ.ಮ.ಗುರುಬಸವರಾಜ್ ಪಾಲ್ಗೊಂಡಿದ್ದರು.</p>.<p>ನಿವೃತ್ತರಾದ ಉಪತಹಶೀಲ್ದಾರ್ ಕೆ.ನಾಗರಾಜ್ ಹಾಗೂ ಶಿರಸ್ತೇದಾರ ಲೀಲಾ ಅವರನ್ನು ಅಭಿನಂದಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>