ತಾಲ್ಲೂಕಿನ ಕಮಲಾಪುರದಲ್ಲಿ ಬುಧವಾರ ಥ್ರೀ ಸ್ಟಾರ್ ಹೋಟೆಲ್ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ನಂತರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಗವಿಯಪ್ಪನವರು ಏಕೆ ಬಿಜೆಪಿ ಬಿಡುತ್ತಾರೆ ಗೊತ್ತಿಲ್ಲ. ಈ ಹಿಂದೆ ಅವರು ಬಿಜೆಪಿ ಟಿಕೆಟ್ ಕೇಳಿದ್ದರು. ಬಿ.ಎಸ್. ಯಡಿಯೂರಪ್ಪ, ಅವರಿಗೆ ಮಾತು ಕೊಟ್ಟಿದ್ದರು. ಆ ವೇಳೆ ನಾನು ಇರಲಿಲ್ಲ. ನಾಲ್ಕು ಸಲ ಜನ ನನ್ನನ್ನು ಗೆಲ್ಲಿಸಿದ್ದಾರೆ. ನಿರೀಕ್ಷೆಗಿಂತ ಹೆಚ್ಚಿನ ಕೆಲಸ ಮಾಡಿದ್ದೇನೆ ಎಂದು ಹೇಳುವುದಿಲ್ಲ. ಅದನ್ನು ಜನ ನಿರ್ಧರಿಸುತ್ತಾರೆ’ ಎಂದರು.