‘ಬಾಲಕಿಯರ ಸರ್ಕಾರಿ ಪ್ರೌಢ ಶಾಲೆ ಹಾಗೂ ಕಾಲೇಜನ್ನು ಒಟ್ಟುಗೂಡಿಸಿ ನೂತನವಾಗಿ ಅಮರಾವತಿಯಲ್ಲಿ ಶಾಲಾ ಕಟ್ಟಡ ನಿರ್ಮಿಸಲಾಗುವುದು ಎಂದು ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿಕೆ ಕೊಟ್ಟಿದ್ದಾರೆ. ಅವರ ನಿರ್ಧಾರ ಸರಿಯಾದುದಲ್ಲ. ಈಗಿರುವ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಬಸ್ ನಿಲ್ದಾಣದ ಸಮೀಪವಿರುವುದರಿಂದ ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಗೆ ಅನುಕೂಲವಾಗಿದೆ. ಅದನ್ನು ಬೇರೆಡೆ ಸ್ಥಳಾಂತರಿಸದೆ ಹಾಲಿ ಇರುವ ಶಾಲಾ, ಕಾಲೇಜು ಅಭಿವೃದ್ಧಿ ಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.