<p><strong>ಕೂಡ್ಲಿಗಿ:</strong> ತಾಲ್ಲೂಕಿನ ಕೈವಲ್ಯಾಪುರ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ಚಾಲಕ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.</p>.<p>ತಮಿಳು ನಾಡಿನ ತೂತುಕುಡಿಯ ಸುಡಲೈ (50) ಎಂಬುವವರು ಮೃತರು.</p>.<p>ಆಂಧ್ರದ ತೈಲೂರಿನಿಂದ ಮಾವಿನ ಹಣ್ಣಿನ ಟ್ರೇಗಳನ್ನು ತುಂಬಿಕೊಂಡು ಮುಂಬೈಗೆ ಹೊರಟಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ–50ರಲ್ಲಿ ಕೈವಲ್ಯಾಪುರ ಬಳಿ ಬರುತ್ತಿದ್ದಾಗ ಹಿಂಬದಿಯ ಟೈರ್ ಪಂಕ್ಚರ್ ಆಗಿದ್ದರಿಂದ ಲಾರಿಯನ್ನು ರಸ್ತೆಯ ಎಡ ಬದಿಯಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಚಿತ್ರದುರ್ಗ ಕಡೆಯಿಂದ ಬಂದ ಲಾರಿಯು ಹಿಂಬದಿಗೆ ಡಿಕ್ಕಿ ಹೊಡೆದಿದೆ. ಕೆ. ಸರವಣ್ ಈ ಲಾರಿಯನ್ನು ಚಾಲನೆ ಮಾಡುತ್ತಿದ್ದರು. ಸುಡಲೈ ಅದೇ ಲಾರಿಯಲ್ಲಿದ್ದರು.</p>.<p>ನಿಂತಿದ್ದ ಲಾರಿಯ ಚಾಲಕ ಬಿ. ರವೀಂದ್ರ ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ:</strong> ತಾಲ್ಲೂಕಿನ ಕೈವಲ್ಯಾಪುರ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ಚಾಲಕ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.</p>.<p>ತಮಿಳು ನಾಡಿನ ತೂತುಕುಡಿಯ ಸುಡಲೈ (50) ಎಂಬುವವರು ಮೃತರು.</p>.<p>ಆಂಧ್ರದ ತೈಲೂರಿನಿಂದ ಮಾವಿನ ಹಣ್ಣಿನ ಟ್ರೇಗಳನ್ನು ತುಂಬಿಕೊಂಡು ಮುಂಬೈಗೆ ಹೊರಟಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ–50ರಲ್ಲಿ ಕೈವಲ್ಯಾಪುರ ಬಳಿ ಬರುತ್ತಿದ್ದಾಗ ಹಿಂಬದಿಯ ಟೈರ್ ಪಂಕ್ಚರ್ ಆಗಿದ್ದರಿಂದ ಲಾರಿಯನ್ನು ರಸ್ತೆಯ ಎಡ ಬದಿಯಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಚಿತ್ರದುರ್ಗ ಕಡೆಯಿಂದ ಬಂದ ಲಾರಿಯು ಹಿಂಬದಿಗೆ ಡಿಕ್ಕಿ ಹೊಡೆದಿದೆ. ಕೆ. ಸರವಣ್ ಈ ಲಾರಿಯನ್ನು ಚಾಲನೆ ಮಾಡುತ್ತಿದ್ದರು. ಸುಡಲೈ ಅದೇ ಲಾರಿಯಲ್ಲಿದ್ದರು.</p>.<p>ನಿಂತಿದ್ದ ಲಾರಿಯ ಚಾಲಕ ಬಿ. ರವೀಂದ್ರ ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>