<p><strong>ಹಗರಿಬೊಮ್ಮನಹಳ್ಳಿ</strong> (<strong>ವಿಜಯನಗರ ಜಿಲ್ಲೆ)</strong>: ಖಾಸಗಿ ಫೈನಾನ್ಸ್ ಕಂಪನಿಯ ವ್ಯವಸ್ಥಾಪಕ ಮತ್ತು ಸಿಬ್ಬಂದಿಯ ಕಿರುಕುಳದಿಂದ ಬೇಸತ್ತು ತಾಲ್ಲೂಕಿನ ಬನ್ನಿಕಲ್ಲು ಗ್ರಾಮದ ಸರಕುಸಾಗಣೆ ವಾಹನ ಚಾಲಕ ಅಂಬೇಶ್ (36) ಎಂಬುವರು ಮರದ ಕೊಂಬೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ಮೂರು ವರ್ಷದ ಹಿಂದೆ ಸಾಲ ಪಡೆದಿದ್ದ ಅಂಬೇಶ್, ಕಳೆದ 3 ತಿಂಗಳಿನಿಂದ ದುಡಿಮೆ ಇಲ್ಲದ ಕಾರಣ ತಿಂಗಳ ಕಂತು ₹14,301 ಕಟ್ಟಲು ಸಾಧ್ಯವಾಗಿರಲಿಲ್ಲ. ಅದಕ್ಕೆ ಮೂರು ದಿನಗಳಿಂದ ಅವರ ಮನೆ ಬಳಿ ಬಂದ ಚೋಳಾ ಫೈನಾನ್ಸ್ ಕಂಪನಿಯ ಸಿಬ್ಬಂದಿ ಅವಾಚ್ಯ ಪದಗಳಿಂದ ನಿಂದಿಸಿದ್ದರು’ ಎಂದು ಅಂಬೇಶ್ ಪತ್ನಿ ಕೆ.ಮಂಜುಳಾ ದೂರು ನೀಡಿದ್ದಾರೆ.</p>.<p>‘ಪೈನಾನ್ಸ್ ವ್ಯವಸ್ಥಾಪಕ ಮತ್ತು ಸಿಬ್ಬಂದಿ ನಾಗಲಾಪುರ ತಾಂಡಾದ ನವೀನ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ’ ಎಂದು ತಂಬ್ರಹಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ</strong> (<strong>ವಿಜಯನಗರ ಜಿಲ್ಲೆ)</strong>: ಖಾಸಗಿ ಫೈನಾನ್ಸ್ ಕಂಪನಿಯ ವ್ಯವಸ್ಥಾಪಕ ಮತ್ತು ಸಿಬ್ಬಂದಿಯ ಕಿರುಕುಳದಿಂದ ಬೇಸತ್ತು ತಾಲ್ಲೂಕಿನ ಬನ್ನಿಕಲ್ಲು ಗ್ರಾಮದ ಸರಕುಸಾಗಣೆ ವಾಹನ ಚಾಲಕ ಅಂಬೇಶ್ (36) ಎಂಬುವರು ಮರದ ಕೊಂಬೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ಮೂರು ವರ್ಷದ ಹಿಂದೆ ಸಾಲ ಪಡೆದಿದ್ದ ಅಂಬೇಶ್, ಕಳೆದ 3 ತಿಂಗಳಿನಿಂದ ದುಡಿಮೆ ಇಲ್ಲದ ಕಾರಣ ತಿಂಗಳ ಕಂತು ₹14,301 ಕಟ್ಟಲು ಸಾಧ್ಯವಾಗಿರಲಿಲ್ಲ. ಅದಕ್ಕೆ ಮೂರು ದಿನಗಳಿಂದ ಅವರ ಮನೆ ಬಳಿ ಬಂದ ಚೋಳಾ ಫೈನಾನ್ಸ್ ಕಂಪನಿಯ ಸಿಬ್ಬಂದಿ ಅವಾಚ್ಯ ಪದಗಳಿಂದ ನಿಂದಿಸಿದ್ದರು’ ಎಂದು ಅಂಬೇಶ್ ಪತ್ನಿ ಕೆ.ಮಂಜುಳಾ ದೂರು ನೀಡಿದ್ದಾರೆ.</p>.<p>‘ಪೈನಾನ್ಸ್ ವ್ಯವಸ್ಥಾಪಕ ಮತ್ತು ಸಿಬ್ಬಂದಿ ನಾಗಲಾಪುರ ತಾಂಡಾದ ನವೀನ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ’ ಎಂದು ತಂಬ್ರಹಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>