ಕೂಡ್ಲಿಗಿ (ವಿಜಯನಗರ): ಪಟ್ಟಣದ ಹೊರವಲಯದ ಗೋವಿಂದಗಿರಿ ಸಮೀಪದ ಚೆಕ್ ಪೊಸ್ಟ್ ನಲ್ಲಿ ಶುಕ್ರವಾರ ಚುನಾವಣಾ ಸಿಬ್ಬಂದಿ ₹2.40 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.
ರಾಘವೇಂದ್ರ ರೆಡ್ಡಿ ಎಂಬುವರು ಸಂಡೂರಿನಿಂದ ಚಿತ್ರದುರ್ಗಕ್ಕೆ ಬೈಕಿನಲ್ಲಿ ಹಣ ತೆಗೆದುಕೊಂಡು ಹೋಗುತ್ತಿದ್ದರು. ಚುನಾವಣಾ ಸಿಬ್ಬಂದಿ ಪರಿಶೀಲಿಸಿದಾಗ ಹಣ ಪತ್ತೆಯಾಗಿದೆ. ಅದಕ್ಕೆ ಸಂಬಂಧಿಸಿದ ದಾಖಲೆಗಳಿರದ ಕಾರಣ ನಗದು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.