ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ‘ನೌಕರರು ಈ ರೀತಿ ಧರಣಿ ನಡೆಸಬಾರದು. ಈ ಕುರಿತು ದೂರು ಕೊಡಬಹುದಷ್ಟೇ’ ಎಂದು ಮಧ್ಯಪ್ರವೇಶಿಸಿ ಹೇಳಿದರು. ಅದಕ್ಕೆ ಸಿಟ್ಟಿಗೆದ್ದ ನೌಕರರು, ‘ನೀವು ನೌಕರರ ಪರ ಮಾತನಾಡುವುದನ್ನು ಬಿಟ್ಟು ಜಿಲ್ಲಾಡಳಿತದ ಪರ ವಕಾಲತ್ತು ಮಾಡುತ್ತಿದ್ದೀರಿ. ನಮ್ಮಿಂದ ಆಯ್ಕೆಯಾದ ನಿಮ್ಮ ಧೋರಣೆ ಸರಿಯೇ?’ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು. ಅವರ ವಿರುದ್ಧ ಧಿಕ್ಕಾರ ಎಂದು ಘೋಷಣೆ ಕೂಗಿದರು.