ಗುರುವಾರ ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯ ಆಮ್ಲಜನಕ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ‘ಈ ಹಿಂದೆ ಆಮ್ಲಜನಕ ಘಟಕದ ನಿರ್ವಹಣೆಯನ್ನು ಆಸ್ಪತ್ರೆಯ ಸಿಬ್ಬಂದಿಯೇ ಮಾಡುತ್ತಿದ್ದರು. ಈಗ ಹೆಚ್ಚುವರಿಯಾಗಿ ಮೂವರು ಎಂಜಿನಿಯರ್ಗಳು ಮೂರು ಪಾಳಿಯಲ್ಲಿ ಕೆಲಸ ನಿರ್ವಹಿಸುವರು. ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಸದಾ ಎಚ್ಚರದಿಂದ ಇರುವಂತೆ ಸೂಚನೆ ಕೊಡಲಾಗಿದೆ’ ಎಂದು ಹೇಳಿದರು.