<p><strong>ಮರಿಯಮ್ಮನಹಳ್ಳಿ (ಹೊಸಪೇಟೆ ತಾಲ್ಲೂಕು):</strong> ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದ್ದ ರೈತ ಉಂಚಟ್ಟಿ ಬೊಮ್ಮಪ್ಪ (62) ಅವರ ಮೃತದೇಹ ಪತ್ತೆಯಾಗಿದ್ದು, ಶವವಿಟ್ಟುಕೊಂಡು ಗ್ರಾಮಸ್ಥರು ಜಿ.ನಾಗಲಾಪುರದ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಹಳ್ಳಕ್ಕೆ ಸೇತುವೆ ನಿರ್ಮಿಸಬೇಕೆಂದು ಹಲವು ವರ್ಷಗಳಿಂದ ಆಗ್ರಹಿಸುತ್ತ ಬಂದರೂ ಕ್ರಮ ಕೈಗೊಂಡಿಲ್ಲ. ನಿರ್ಲಕ್ಷ್ಯದಿಂದ ರೈತ ಮೃತಪಟ್ಟಿದ್ದಾನೆ. ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು. ಹಳ್ಳಕ್ಕೆ ಸೇತುವೆ ನಿರ್ಮಿಸಬೇಕೆಂದು ಆಗ್ರಹಿಸಿದರು.</p>.<p>ಭಾರಿ ಮಳೆಗೆ ರಭಸದಿಂದ ಹರಿಯುತ್ತಿದ್ದ ಹಳ್ಳದ ನೀರಿನಲ್ಲಿ ದಾಟಿಕೊಂಡು ಹೋಗುವಾ ಬೊಮ್ಮಪ್ಪ ಕೊಚ್ಚಿಕೊಂಡು ಹೋಗಿದ್ದರು. ಅಗ್ನಿಶಾಮಕ ಸಿಬ್ಬಂದಿ ಬಂದು ಶವ ಪತ್ತೆ ಹಚ್ಚಿದ್ದರು.</p>.<p>ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ, ಕಂದಾಯನಿರೀಕ್ಷಕ ಅಂದಾನಗೌಡ, ಗ್ರಾಮಲೆಕ್ಕಿಗ ಬಸವರಾಜ, ಪಿ.ಡಿ.ಒ ರಾಘವೇಂದ್ರ, ಕೃಷಿ ಅಧಿಕಾರಿ ಶಿವಮೂರ್ತಿ ಇದ್ದರು.</p>.<p><a href="https://www.prajavani.net/district/vijayanagara/searching-operation-for-man-who-droned-in-water-in-hosapete-959766.html" itemprop="url">ಹೊಸಪೇಟೆ| ಹಳ್ಳದ ನೀರಿನ ರಭಸಕ್ಕೆ ಕೊಚ್ಚಿ ಹೋದ ರೈತನಿಗಾಗಿ ಹುಡುಕಾಟ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಿಯಮ್ಮನಹಳ್ಳಿ (ಹೊಸಪೇಟೆ ತಾಲ್ಲೂಕು):</strong> ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದ್ದ ರೈತ ಉಂಚಟ್ಟಿ ಬೊಮ್ಮಪ್ಪ (62) ಅವರ ಮೃತದೇಹ ಪತ್ತೆಯಾಗಿದ್ದು, ಶವವಿಟ್ಟುಕೊಂಡು ಗ್ರಾಮಸ್ಥರು ಜಿ.ನಾಗಲಾಪುರದ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಹಳ್ಳಕ್ಕೆ ಸೇತುವೆ ನಿರ್ಮಿಸಬೇಕೆಂದು ಹಲವು ವರ್ಷಗಳಿಂದ ಆಗ್ರಹಿಸುತ್ತ ಬಂದರೂ ಕ್ರಮ ಕೈಗೊಂಡಿಲ್ಲ. ನಿರ್ಲಕ್ಷ್ಯದಿಂದ ರೈತ ಮೃತಪಟ್ಟಿದ್ದಾನೆ. ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು. ಹಳ್ಳಕ್ಕೆ ಸೇತುವೆ ನಿರ್ಮಿಸಬೇಕೆಂದು ಆಗ್ರಹಿಸಿದರು.</p>.<p>ಭಾರಿ ಮಳೆಗೆ ರಭಸದಿಂದ ಹರಿಯುತ್ತಿದ್ದ ಹಳ್ಳದ ನೀರಿನಲ್ಲಿ ದಾಟಿಕೊಂಡು ಹೋಗುವಾ ಬೊಮ್ಮಪ್ಪ ಕೊಚ್ಚಿಕೊಂಡು ಹೋಗಿದ್ದರು. ಅಗ್ನಿಶಾಮಕ ಸಿಬ್ಬಂದಿ ಬಂದು ಶವ ಪತ್ತೆ ಹಚ್ಚಿದ್ದರು.</p>.<p>ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ, ಕಂದಾಯನಿರೀಕ್ಷಕ ಅಂದಾನಗೌಡ, ಗ್ರಾಮಲೆಕ್ಕಿಗ ಬಸವರಾಜ, ಪಿ.ಡಿ.ಒ ರಾಘವೇಂದ್ರ, ಕೃಷಿ ಅಧಿಕಾರಿ ಶಿವಮೂರ್ತಿ ಇದ್ದರು.</p>.<p><a href="https://www.prajavani.net/district/vijayanagara/searching-operation-for-man-who-droned-in-water-in-hosapete-959766.html" itemprop="url">ಹೊಸಪೇಟೆ| ಹಳ್ಳದ ನೀರಿನ ರಭಸಕ್ಕೆ ಕೊಚ್ಚಿ ಹೋದ ರೈತನಿಗಾಗಿ ಹುಡುಕಾಟ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>