<p><strong>ಕಂಪ್ಲಿ:</strong> ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸಿರುಗುಪ್ಪ ತಾಲ್ಲೂಕಿನ ಕರೂರು ಗ್ರಾಮದಿಂದ ಜಲಾಶಯದವರೆಗೆ ಹಮ್ಮಿಕೊಂಡಿರುವ ಐದನೇ ದಿನದ ಪಾದಯಾತ್ರೆಯು ತಾಲ್ಲೂಕಿನ ಚಿಕ್ಕಜಾಯಗನೂರು, ಗೋನಾಳ, ದೇವಸಮುದ್ರದ ಮೂಲಕ ಶನಿವಾರ ಪಟ್ಟಣ ತಲುಪಿತು.</p><p>ಸಂಘದ ಅಧ್ಯಕ್ಷ ಆರ್. ಮಾಧವರೆಡ್ಡಿ ಮಾತನಾಡಿ, ‘ಎರಡನೇ ಬೆಳೆ ಬೆಳೆಯಲು ನೀರು ಬಿಡುವುದಿಲ್ಲ ಎನ್ನುವ ಸರ್ಕಾರದ ನಿರ್ಧಾರ ಅವೈಜ್ಞಾನಿಕವಾಗಿದೆ’ ಎಂದು ಹೇಳಿದರು.</p><p>‘ಹವಾಮಾನ ವೈಪರೀತ್ಯದಿಂದ ಮುಂಗಾರಿನಲ್ಲಿ ಬೆಳೆದ ಭತ್ತ ಬೆಳೆಯಲ್ಲಿ ಹಲವು ರೋಗಗಳು ಕಾಣಿಸಿಕೊಂಡು, ಇಳುವರಿ ಕುಂಟಿತವಾಗಿದೆ. ಹಿಂಗಾರು ಹಂಗಾಮಿನ ಭತ್ತಕ್ಕೆ ನೀರು ಪೂರೈಸಿದಲ್ಲಿ ರೈತರು ನಷ್ಟ ಸರಿದೂಗಿಸಿಕೊಳ್ಳಲು ಅನುಕೂಲವಾಗುತ್ತದೆ’ ಎಂದು ತಿಳಿಸಿದರು.</p><p>‘ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತದೆ. ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಯ ಶಾಸಕರು, ರೈತರ ಸಮ್ಮುಖದಲ್ಲಿ ಮುನಿರಾಬಾದ್ನಲ್ಲಿ ಸಭೆ ನಡೆಸಲು ಹಿಂದೇಟು ಹಾಕುವುದಾದರು ಏಕೆ?’ ಎಂದು ಕೇಳಿದರು</p><p>ರೈತ ಮುಖಂಡರಾದ ಚಾಗನೂರು ಮಲ್ಲಿಕಾರ್ಜುನರೆಡ್ಡಿ, ಚಲ್ಲಾ ವೆಂಕಟನಾಯ್ಡು, ಜಿ. ರಾಮನಗೌಡ, ಪ್ರಭಾಕರ ರೆಡ್ಡಿ, ಸುರೇಂದ್ರ, ಜಿ. ಪಂಪನಗೌಡ, ಚಾನಾಳ್ ವಿರುಪಾಕ್ಷಿ, ಕರೂರು ಸಣ್ಣ ತಿಮ್ಮಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸಿರುಗುಪ್ಪ ತಾಲ್ಲೂಕಿನ ಕರೂರು ಗ್ರಾಮದಿಂದ ಜಲಾಶಯದವರೆಗೆ ಹಮ್ಮಿಕೊಂಡಿರುವ ಐದನೇ ದಿನದ ಪಾದಯಾತ್ರೆಯು ತಾಲ್ಲೂಕಿನ ಚಿಕ್ಕಜಾಯಗನೂರು, ಗೋನಾಳ, ದೇವಸಮುದ್ರದ ಮೂಲಕ ಶನಿವಾರ ಪಟ್ಟಣ ತಲುಪಿತು.</p><p>ಸಂಘದ ಅಧ್ಯಕ್ಷ ಆರ್. ಮಾಧವರೆಡ್ಡಿ ಮಾತನಾಡಿ, ‘ಎರಡನೇ ಬೆಳೆ ಬೆಳೆಯಲು ನೀರು ಬಿಡುವುದಿಲ್ಲ ಎನ್ನುವ ಸರ್ಕಾರದ ನಿರ್ಧಾರ ಅವೈಜ್ಞಾನಿಕವಾಗಿದೆ’ ಎಂದು ಹೇಳಿದರು.</p><p>‘ಹವಾಮಾನ ವೈಪರೀತ್ಯದಿಂದ ಮುಂಗಾರಿನಲ್ಲಿ ಬೆಳೆದ ಭತ್ತ ಬೆಳೆಯಲ್ಲಿ ಹಲವು ರೋಗಗಳು ಕಾಣಿಸಿಕೊಂಡು, ಇಳುವರಿ ಕುಂಟಿತವಾಗಿದೆ. ಹಿಂಗಾರು ಹಂಗಾಮಿನ ಭತ್ತಕ್ಕೆ ನೀರು ಪೂರೈಸಿದಲ್ಲಿ ರೈತರು ನಷ್ಟ ಸರಿದೂಗಿಸಿಕೊಳ್ಳಲು ಅನುಕೂಲವಾಗುತ್ತದೆ’ ಎಂದು ತಿಳಿಸಿದರು.</p><p>‘ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತದೆ. ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಯ ಶಾಸಕರು, ರೈತರ ಸಮ್ಮುಖದಲ್ಲಿ ಮುನಿರಾಬಾದ್ನಲ್ಲಿ ಸಭೆ ನಡೆಸಲು ಹಿಂದೇಟು ಹಾಕುವುದಾದರು ಏಕೆ?’ ಎಂದು ಕೇಳಿದರು</p><p>ರೈತ ಮುಖಂಡರಾದ ಚಾಗನೂರು ಮಲ್ಲಿಕಾರ್ಜುನರೆಡ್ಡಿ, ಚಲ್ಲಾ ವೆಂಕಟನಾಯ್ಡು, ಜಿ. ರಾಮನಗೌಡ, ಪ್ರಭಾಕರ ರೆಡ್ಡಿ, ಸುರೇಂದ್ರ, ಜಿ. ಪಂಪನಗೌಡ, ಚಾನಾಳ್ ವಿರುಪಾಕ್ಷಿ, ಕರೂರು ಸಣ್ಣ ತಿಮ್ಮಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>