ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವದಾಸಿಯರಿಗೆ ಸೌಕರ್ಯಕ್ಕೆ ಆಗ್ರಹ

Last Updated 9 ನವೆಂಬರ್ 2022, 11:42 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಪುನರ್ವಸತಿ ಕಲ್ಪಿತ ಮಾಜಿ ದೇವದಾಸಿಯರಿಗೆ ಮೂಲಸೌಕರ್ಯ ಒದಗಿಸಿಕೊಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ನಂಜುಂಡಸ್ವಾಮಿ ಬಣ) ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿದರು.

ಮಾಜಿ ದೇವದಾಸಿಯರಿಗೆ ನಿವೇಶನ ಕೊಡಬೇಕು. ಮನೆ ಕಟ್ಟಿಸಿಕೊಡಬೇಕು. ಉಳುಮೆ ಮಾಡಿ ಬದುಕಲು ಕೃಷಿ ಜಮೀನು ಕೊಡಬೇಕು. ಪಿಂಚಣಿ ಕೊಡಬೇಕು. ಸರ್ವೇಯಿಂದ ಅನೇಕ ಮಾಜಿ ದೇವದಾಸಿಯರು ಹೊರಗುಳಿದಿದ್ದಾರೆ. ಹೊಸದಾಗಿ ಸರ್ವೇ ನಡೆಸಿ, ಬಿಟ್ಟು ಹೋದವರ ಹೆಸರು ಸೇರಿಸಿ, ಸರ್ಕಾರದ ಸೌಲಭ್ಯ ತಲುಪಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ಎ. ಗಾಳೆಪ್ಪ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT