ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಸ್ವಾಧೀನ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರುದ್ಧ ರೈತರ ಪಾದಯಾತ್ರೆ

Last Updated 24 ಮಾರ್ಚ್ 2023, 10:09 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಭೂಸ್ವಾಧೀನ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ‘ಸಂಯುಕ್ತ ಹೋರಾಟ ಕರ್ನಾಟಕ’ ಸಂಘಟನೆ ಅಡಿ ರೈತರು ತಾಲ್ಲೂಕಿನ ಹಂಪಿಯಿಂದ ನಗರದ ವರೆಗೆ ಶುಕ್ರವಾರ ಪಾದಯಾತ್ರೆ ನಡೆಸಿದರು.

ಹಂಪಿ ವಿರೂಪಾಕ್ಷೇಶ್ವರ ದೇಗುಲದ ಬಳಿ ಆರಂಭಗೊಂಡ ಪಾದಯಾತ್ರೆ ಕಡ್ಡಿರಾಂಪುರ, ಮಲಪನಗುಡಿ, ಕೊಂಡನಾಯಕನಹಳ್ಳಿ, ಅನಂತಶಯನಗುಡಿ ಮೂಲಕ ಹಾದು ಡಾ. ಪುನೀತ್‌ ರಾಜಕುಮಾರ್‌ ವೃತ್ತ ತಲುಪಿದರು. ಅಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಜಿ. ಅವರಿಗೆ ಸಲ್ಲಿಸಿದರು.

ಹೊಸಪೇಟೆಯಲ್ಲಿ ಸರ್ಕಾರವೇ ಸಕ್ಕರೆ ಕಾರ್ಖಾನೆ ಆರಂಭಿಸಬೇಕು. ತಾಲ್ಲೂಕಿನಲ್ಲಿ ರಾಜಾಪುರ, ಪಿ.ಕೆ.ಹಳ್ಳಿ, ನಲಾಪುರ ಗ್ರಾಮಗಳಿಗೆ ಅನುಕೂಲವಾಗುವಂತೆ ಏತ ನೀರಾವರಿ ಯೋಜನೆ ಪ್ರಾರಂಭಿಸಬೇಕು. ತಾಲ್ಲೂಕಿನ ಜಂಬುನಾಥಹಳ್ಳಿ, ಸಂಕ್ಲಾಪುರದಲ್ಲಿ ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಪಟ್ಟಾ ಕೊಡಬೇಕು. ನಿವೇಶನ ರಹಿತರಿಗೆ ನಿವೇಶನ ನೀಡಬೇಕು. ಜಿಲ್ಲಾ ಖನಿಜ ಪ್ರತಿಷ್ಠಾನದ ನಿಧಿ ಸಮರ್ಪಕವಾಗಿ ಬಳಸಬೇಕು. ಎಲ್‌ಎಲ್‌ಸಿಗೆ ಏ. 20ರ ವರೆಗೆ ನೀರು ಹರಿಸಬೇಕು. ಅಗತ್ಯ ವಸ್ತುಗಳು, ಸಿಲಿಂಡರ್‌, ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಸಬೇಕು. ಕೃಷಿ ಪರಿಕರ, ರಸಗೊಬ್ಬರ ಬೆಲೆ ನಿಯಂತ್ರಿಸಬೇಕೆಂದು ಆಗ್ರಹಿಸಿದರು.

ಸಂಘಟನೆಯ ಮುಖಂಡರಾದ ಆರ್‌. ಭಾಸ್ಕರ್‌ ರೆಡ್ಡಿ, ಜೆ. ಕಾರ್ತಿಕ್‌, ಸಣ್ಣಕ್ಕಿ ರುದ್ರಪ್ಪ, ನಾಗೇಶ ಲಂಬಾಣಿ, ಎನ್‌. ಯಲ್ಲಾಲಿಂಗ, ಎನ್‌. ಅಂಕ್ಲೇಶ್‌, ಕಾಳಿದಾಸ್‌, ಷರೀಫ್‌, ಜೆ.ಎನ್‌. ಕಾಳಿದಾಸ್‌, ವಿ. ಸ್ವಾಮಿ, ಪ್ರಕಾಶ್‌ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT