<p><strong>ಹೊಸಪೇಟೆ (ವಿಜಯನಗರ):</strong> ಕೇಂದ್ರ ಸರ್ಕಾರದ 16ನೇ ಹಣಕಾಸು ಆಯೋಗದ ಅಧ್ಯಕ್ಷ ಅರವಿಂದ ಪನಗಡಿಯಾ, ಸದಸ್ಯರು, ನಿರ್ದೇಶಕರು ಮತ್ತು ಕಾರ್ಯದರ್ಶಿ ಅವರನ್ನು ಒಳಗೊಂಡ ನಿಯೋಗ ಶುಕ್ರವಾರ ಐತಿಹಾಸಿಕ ಹಂಪಿಗೆ ಭೇಟಿ ನೀಡಿ, ಅಲ್ಲಿನ ಸೌಂದರ್ಯ ಕಂಡು ಪುಳಕಿತಗೊಂಡಿತು.</p><p>ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ತೋರಣಗಲ್ ವಿಮಾನನಿಲ್ದಾಣಕ್ಕೆ ಬಂದ ತಂಡ ಬಳಿಕ ವಿಶೇಷ ವಾಹನದಲ್ಲಿ ಹಂಪಿಗೆ ಆಗಮಿಸಿತ್ತು. ಮೊದಲಿಗೆ ವಿಜಯ ವಿಠ್ಠಲ ದೇವಸ್ಥಾನದ ಸೌಂದರ್ಯ ಸವಿದ ತಂಡ, ಬಳಿಕ ವಿರೂಪಾಕ್ಷ ದೇವಸ್ಥಾನಕ್ಕೆ ತೆರಳಿ ಅಲ್ಲಿನ ವೈಭವ ಕಣ್ತುಂಬಿಕೊಂಡಿತು.</p><p>ನಿಯೋಗದಲ್ಲಿ ಆಯೋಗದ ಸದಸ್ಯರಾದ ಅಜಯ್ ನಾರಾಯಣ ಝಾ, ಅನ್ನಿ ಜಾರ್ಜ್ ಮ್ಯಾಥ್ಯೂ, ಸೌಮ್ಯ ಕಟಿ ಘೋಷ್, ಮನೋಜ್ ಪಾಂಡಾ, ಕಾರ್ಯದರ್ಶಿ ರಿತ್ವಿಕ್ ರಂಜನಂ ಪಾಂಡೆ, ಜಂಟಿ ನಿರ್ದೇಶಕ ರಾಹುಲ್ ಜೈನ್, ಉಪ ಕಾರ್ಯದರ್ಶಿ ಅಜಿತ್ ಕುಮಾರ್ ರಂಜನ್ ಇತರರು ಇದ್ದರು. </p><p>ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತಿಕ್, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಎಸ್ಪಿ ಶ್ರೀಹರಿಬಾಬು ಬಿ.ಎಲ್., ಜಿಲ್ಲಾ ಪಂಚಾಯಿತಿ ಸಿಇಒ ಮೊಹಮದ್ ಅಲಿ ಅಕ್ರಮ ಷಾ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಕೇಂದ್ರ ಸರ್ಕಾರದ 16ನೇ ಹಣಕಾಸು ಆಯೋಗದ ಅಧ್ಯಕ್ಷ ಅರವಿಂದ ಪನಗಡಿಯಾ, ಸದಸ್ಯರು, ನಿರ್ದೇಶಕರು ಮತ್ತು ಕಾರ್ಯದರ್ಶಿ ಅವರನ್ನು ಒಳಗೊಂಡ ನಿಯೋಗ ಶುಕ್ರವಾರ ಐತಿಹಾಸಿಕ ಹಂಪಿಗೆ ಭೇಟಿ ನೀಡಿ, ಅಲ್ಲಿನ ಸೌಂದರ್ಯ ಕಂಡು ಪುಳಕಿತಗೊಂಡಿತು.</p><p>ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ತೋರಣಗಲ್ ವಿಮಾನನಿಲ್ದಾಣಕ್ಕೆ ಬಂದ ತಂಡ ಬಳಿಕ ವಿಶೇಷ ವಾಹನದಲ್ಲಿ ಹಂಪಿಗೆ ಆಗಮಿಸಿತ್ತು. ಮೊದಲಿಗೆ ವಿಜಯ ವಿಠ್ಠಲ ದೇವಸ್ಥಾನದ ಸೌಂದರ್ಯ ಸವಿದ ತಂಡ, ಬಳಿಕ ವಿರೂಪಾಕ್ಷ ದೇವಸ್ಥಾನಕ್ಕೆ ತೆರಳಿ ಅಲ್ಲಿನ ವೈಭವ ಕಣ್ತುಂಬಿಕೊಂಡಿತು.</p><p>ನಿಯೋಗದಲ್ಲಿ ಆಯೋಗದ ಸದಸ್ಯರಾದ ಅಜಯ್ ನಾರಾಯಣ ಝಾ, ಅನ್ನಿ ಜಾರ್ಜ್ ಮ್ಯಾಥ್ಯೂ, ಸೌಮ್ಯ ಕಟಿ ಘೋಷ್, ಮನೋಜ್ ಪಾಂಡಾ, ಕಾರ್ಯದರ್ಶಿ ರಿತ್ವಿಕ್ ರಂಜನಂ ಪಾಂಡೆ, ಜಂಟಿ ನಿರ್ದೇಶಕ ರಾಹುಲ್ ಜೈನ್, ಉಪ ಕಾರ್ಯದರ್ಶಿ ಅಜಿತ್ ಕುಮಾರ್ ರಂಜನ್ ಇತರರು ಇದ್ದರು. </p><p>ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತಿಕ್, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಎಸ್ಪಿ ಶ್ರೀಹರಿಬಾಬು ಬಿ.ಎಲ್., ಜಿಲ್ಲಾ ಪಂಚಾಯಿತಿ ಸಿಇಒ ಮೊಹಮದ್ ಅಲಿ ಅಕ್ರಮ ಷಾ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>