ಹೊಸಪೇಟೆ (ವಿಜಯನಗರ): ‘ಜಿಲ್ಲೆಯಲ್ಲಿ 22 ಗ್ರಾಮಗಳು ನದಿ ಪಾತ್ರದಲ್ಲಿ ಬರುತ್ತಿದ್ದು, ನದಿ ನೀರು ಹೆಚ್ಚಾದಲ್ಲಿ ಮುಳುಗಡೆಯಾಗುವ ಸಂಭವವಿದೆ. ಅಂತಹ ಗ್ರಾಮಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ವೆಂಕಟೇಶ್ ಟಿ. ಅವರು ಅಧಿಕಾರಿಗಳಿಗೆ ಸೂಚಿಸಿದರು.