<p><strong>ತೆಕ್ಕಲಕೋಟೆ</strong>: ಸಮೀಪದ ನಡವಿ ಗ್ರಾಮದಲ್ಲಿ ಬೆಂಕಿ ಆಕಸ್ಮಿಕದಿಂದಾಗಿ ಹುಲ್ಲಿನ ಬಣವೆ ಹಾಗೂ ದನದ ಕೊಟ್ಟಿಗೆ ಸುಟ್ಟು ಭಸ್ಮವಾದ ಘಟನೆ ಶುಕ್ರವಾರ ಸಂಭವಿಸಿದೆ.</p>.<p>ಗ್ರಾಮದ ಕಂಪ್ಲಿ ರಸ್ತೆಯಲ್ಲಿನ ರೈತ ಕೆ.ಮೂರ್ತಿ ಅವರಿಗೆ ಸೇರಿದ ಹುಲ್ಲಿನ ಬಣವೆಗೆ ಬೆಂಕಿ ಬಿದ್ದ ಪರಿಣಾಮ ಪಕ್ಕದಲ್ಲಿ ಇದ್ದ ದನದ ಕೊಟ್ಟಿಗೆಗೆ ಬೆಂಕಿ ವ್ಯಾಪಿಸಿದೆ. ಇದರಿಂದಾಗಿ ಒಂದು ಎಮ್ಮೆ ಕರು ಹಾಗೂ ಒಂದು ಆಕಳು ಕರು ಬೆಂಕಿಗೆ ಆಹುತಿಯಾಗಿವೆ. ₹1.10 ಲಕ್ಷ ಮೌಲ್ಯದ ಹುಲ್ಲಿನ ಬಣವೆ ಸುಟ್ಟಿರುವುದಾಗಿ ಅಂದಾಜಿಸಲಾಗಿದೆ.</p>.<p>ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.</p>.<p><strong>ರಸ್ತೆ ಬದಿಯ ತಿಪ್ಪೆ ಭಸ್ಮ</strong></p>.<p>ತೆಕ್ಕಲಕೋಟೆ: ಪಟ್ಟಣದ ನಿಟ್ಟೂರು ರಸ್ತೆಯ ಬಾಬಾ ರೈಸ್ ಮಿಲ್ ಬಳಿ ರಸ್ತೆ ಬದಿಯಲ್ಲಿನ ತಿಪ್ಪೆಗಳಿಗೆ ಶುಕ್ರವಾರ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ 4 ತಿಪ್ಪೆಗಳು ಸುಟ್ಟು ಭಸ್ಮವಾಗಿವೆ.</p>.<p>ಸಿರುಗುಪ್ಪ, ಕುರುಗೋಡು ಹಾಗೂ ಬಳ್ಳಾರಿ ಅಗ್ನಿಶಾಮಕ ಠಾಣೆ ಸಿಬ್ಬಂದಿ ಬರುವುದು ತಡವಾಗುತ್ತದೆ ಎಂಬ ಕಾರಣಕ್ಕೆ ಜನರೇ ಬೆಂಕಿ ನಂದಿಸಲು ಪ್ರಯತ್ನಪಟ್ಟಿದ್ದಾರೆ. ಪಟ್ಟಣ ಪಂಚಾಯಿತಿಯ ಜೆಸಿಬಿ ಸಹಾಯದಿಂದ ಉಳಿದ ತಿಪ್ಪೆಗಳನ್ನು ಸರಿಸಿ ಹೆಚ್ಚಿನ ಅನಾಹುತ ತಪ್ಪಿಸಲಾಯಿತು.</p>.<p>ನಡವಿ ಗ್ರಾಮಕ್ಕೆ ತೆರಳಿದ್ದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಸಂಜೆ ಆಗಮಿಸಿ ಬೆಂಕಿ ನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಕ್ಕಲಕೋಟೆ</strong>: ಸಮೀಪದ ನಡವಿ ಗ್ರಾಮದಲ್ಲಿ ಬೆಂಕಿ ಆಕಸ್ಮಿಕದಿಂದಾಗಿ ಹುಲ್ಲಿನ ಬಣವೆ ಹಾಗೂ ದನದ ಕೊಟ್ಟಿಗೆ ಸುಟ್ಟು ಭಸ್ಮವಾದ ಘಟನೆ ಶುಕ್ರವಾರ ಸಂಭವಿಸಿದೆ.</p>.<p>ಗ್ರಾಮದ ಕಂಪ್ಲಿ ರಸ್ತೆಯಲ್ಲಿನ ರೈತ ಕೆ.ಮೂರ್ತಿ ಅವರಿಗೆ ಸೇರಿದ ಹುಲ್ಲಿನ ಬಣವೆಗೆ ಬೆಂಕಿ ಬಿದ್ದ ಪರಿಣಾಮ ಪಕ್ಕದಲ್ಲಿ ಇದ್ದ ದನದ ಕೊಟ್ಟಿಗೆಗೆ ಬೆಂಕಿ ವ್ಯಾಪಿಸಿದೆ. ಇದರಿಂದಾಗಿ ಒಂದು ಎಮ್ಮೆ ಕರು ಹಾಗೂ ಒಂದು ಆಕಳು ಕರು ಬೆಂಕಿಗೆ ಆಹುತಿಯಾಗಿವೆ. ₹1.10 ಲಕ್ಷ ಮೌಲ್ಯದ ಹುಲ್ಲಿನ ಬಣವೆ ಸುಟ್ಟಿರುವುದಾಗಿ ಅಂದಾಜಿಸಲಾಗಿದೆ.</p>.<p>ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.</p>.<p><strong>ರಸ್ತೆ ಬದಿಯ ತಿಪ್ಪೆ ಭಸ್ಮ</strong></p>.<p>ತೆಕ್ಕಲಕೋಟೆ: ಪಟ್ಟಣದ ನಿಟ್ಟೂರು ರಸ್ತೆಯ ಬಾಬಾ ರೈಸ್ ಮಿಲ್ ಬಳಿ ರಸ್ತೆ ಬದಿಯಲ್ಲಿನ ತಿಪ್ಪೆಗಳಿಗೆ ಶುಕ್ರವಾರ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ 4 ತಿಪ್ಪೆಗಳು ಸುಟ್ಟು ಭಸ್ಮವಾಗಿವೆ.</p>.<p>ಸಿರುಗುಪ್ಪ, ಕುರುಗೋಡು ಹಾಗೂ ಬಳ್ಳಾರಿ ಅಗ್ನಿಶಾಮಕ ಠಾಣೆ ಸಿಬ್ಬಂದಿ ಬರುವುದು ತಡವಾಗುತ್ತದೆ ಎಂಬ ಕಾರಣಕ್ಕೆ ಜನರೇ ಬೆಂಕಿ ನಂದಿಸಲು ಪ್ರಯತ್ನಪಟ್ಟಿದ್ದಾರೆ. ಪಟ್ಟಣ ಪಂಚಾಯಿತಿಯ ಜೆಸಿಬಿ ಸಹಾಯದಿಂದ ಉಳಿದ ತಿಪ್ಪೆಗಳನ್ನು ಸರಿಸಿ ಹೆಚ್ಚಿನ ಅನಾಹುತ ತಪ್ಪಿಸಲಾಯಿತು.</p>.<p>ನಡವಿ ಗ್ರಾಮಕ್ಕೆ ತೆರಳಿದ್ದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಸಂಜೆ ಆಗಮಿಸಿ ಬೆಂಕಿ ನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>