ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಹಂಪಿ ಅಕ್ಕ ತಂಗಿ ಗುಡ್ಡದ ಬಳಿ ಬೆಂಕಿ

Last Updated 28 ಫೆಬ್ರುವರಿ 2023, 14:48 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇಲ್ಲಿಗೆ ಸಮೀಪದ ಹಂಪಿ ಪರಿಸರದಲ್ಲಿ ಮಂಗಳವಾರ ಸಂಜೆ ಬೆಂಕಿ ಹೊತ್ತಿಕೊಂಡಿದೆ.

ಕಮಲಾಪುರದಿಂದ ಹಂಪಿಗೆ ಹೋಗುವ ಮಾರ್ಗದಲ್ಲಿನ ಅಕ್ಕ ತಂಗಿಯರ ಗುಡ್ಡದ ಸಮೀಪ ಕುರುಚಲು ಕಾಡಿಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿದೆ. ಬಿಸಿಲಿನಿಂದ ಕುರುಚಲು ಕಾಡು ಸಂಪೂರ್ಣ ಒಣಗಿ ಹೋಗಿದ್ದು, ಬೆಂಕಿ ಕೆನ್ನಾಲಿಗೆ ಎಲ್ಲೆಡೆ ಹರಡಿದೆ.

ಸ್ಥಳೀಯರು ವಿಷಯ ತಿಳಿಸಿದ್ದರಿಂದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಘಟನೆಗೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗೆ ಜೋಳದರಾಶಿ ಗುಡ್ಡದಲ್ಲೂ ಬೆಂಕಿ ಹೊತ್ತಿಕೊಂಡಿತ್ತು. ಕಿಡಿಗೇಡಿಗಳ ಕೃತ್ಯದಿಂದ ಘಟನೆ ಸಂಭವಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT