ಹೊಸಪೇಟೆ (ವಿಜಯನಗರ): ಇಲ್ಲಿಗೆ ಸಮೀಪದ ಹಂಪಿ ಪರಿಸರದಲ್ಲಿ ಮಂಗಳವಾರ ಸಂಜೆ ಬೆಂಕಿ ಹೊತ್ತಿಕೊಂಡಿದೆ.
ಕಮಲಾಪುರದಿಂದ ಹಂಪಿಗೆ ಹೋಗುವ ಮಾರ್ಗದಲ್ಲಿನ ಅಕ್ಕ ತಂಗಿಯರ ಗುಡ್ಡದ ಸಮೀಪ ಕುರುಚಲು ಕಾಡಿಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿದೆ. ಬಿಸಿಲಿನಿಂದ ಕುರುಚಲು ಕಾಡು ಸಂಪೂರ್ಣ ಒಣಗಿ ಹೋಗಿದ್ದು, ಬೆಂಕಿ ಕೆನ್ನಾಲಿಗೆ ಎಲ್ಲೆಡೆ ಹರಡಿದೆ.