<p><strong>ಹೊಸಪೇಟೆ</strong>: ನಗರದ ವಿಜಯನಗರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ (ಎನ್ಎಸ್ಎಸ್) ವತಿಯಿಂದ ಆಯೋಜಿಸಿದ ವಾರ್ಷಿಕ ಶಿಬಿರದ ನಾಲ್ಕನೇ ದಿನವಾದ ಗುರುವಾರ ಅಗ್ನಿಶಾಮಕ ದಳದಿಂದ ಅಣಕು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.</p>.<p>ಅಗ್ನಿಶಾಮಕ ದಳ ಅಧಿಕಾರಿ ಯುವರಾಜ ಮತ್ತು ಬಲರಾಜ ಅವರು ವಿಪತ್ತು ನಿರ್ವಹಣೆಯನ್ನು ಕುರಿತು ವಿಶೇಷ ಉಪನ್ಯಾಸ ನೀಡಿದರು. ಯುವರಾಜ ಅವರು ಬೆಂಕಿಗಳ ವಿಧಗಳು ಯಾವುವು? ತುರ್ತು ಸಂದರ್ಭದಲ್ಲಿ ಅವುಗಳನ್ನು ನಂದಿಸಲು ಅನುಸರಿಸಬೇಕಾದ ತಂತ್ರಗಳು ಮತ್ತು ಮಾರ್ಗೋಪಾಯಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.</p><p>ನಂತರ ಬಾಲರಾಜ ಅವರು ಬೆಂಕಿ ನಂದಿಸುವ ವಿಧಗಳನ್ನು ಅಗ್ನಿಶಾಮಕ ದಳದವರ ಉಪಕರಣಗಳಿಂದ ತಿಳಿಸಿಕೊಟ್ಟರು.</p>.<p>ಬೆಂಕಿ ನಂದಿಸುವ ಸಂದರ್ಭದಲ್ಲಿ ಬಳಸುವ ಸಮವಸ್ತ್ರಗಳ ಕುರಿತು, ನೀರಿನಿಂದ ಉಂಟಾಗುವ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಬೇಕು, ಕೆಲವು ಉರಗ ಮತ್ತು ಪ್ರಾಣಿಗಳಿಂದ ಜನರನ್ನು ಮತ್ತು ನಮ್ಮನ್ನು ನಾವು ಹೇಗೆ ರಕ್ಷಿಸಿಕೊಳ್ಳಬೇಕು ಮೊದಲಾದ ವಿಷಯಗಳನ್ನು ತಿಳಿಸಿಕೊಟ್ಟರು.</p>.<p>ಎನ್ಎಸ್ಎಸ್ ಘಟಕದ ಸಂಯೋಜಕ ಪ್ರೊ.ಗಾದೆಪ್ಪ, ಪ್ರೊ.ವಿರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong>: ನಗರದ ವಿಜಯನಗರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ (ಎನ್ಎಸ್ಎಸ್) ವತಿಯಿಂದ ಆಯೋಜಿಸಿದ ವಾರ್ಷಿಕ ಶಿಬಿರದ ನಾಲ್ಕನೇ ದಿನವಾದ ಗುರುವಾರ ಅಗ್ನಿಶಾಮಕ ದಳದಿಂದ ಅಣಕು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.</p>.<p>ಅಗ್ನಿಶಾಮಕ ದಳ ಅಧಿಕಾರಿ ಯುವರಾಜ ಮತ್ತು ಬಲರಾಜ ಅವರು ವಿಪತ್ತು ನಿರ್ವಹಣೆಯನ್ನು ಕುರಿತು ವಿಶೇಷ ಉಪನ್ಯಾಸ ನೀಡಿದರು. ಯುವರಾಜ ಅವರು ಬೆಂಕಿಗಳ ವಿಧಗಳು ಯಾವುವು? ತುರ್ತು ಸಂದರ್ಭದಲ್ಲಿ ಅವುಗಳನ್ನು ನಂದಿಸಲು ಅನುಸರಿಸಬೇಕಾದ ತಂತ್ರಗಳು ಮತ್ತು ಮಾರ್ಗೋಪಾಯಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.</p><p>ನಂತರ ಬಾಲರಾಜ ಅವರು ಬೆಂಕಿ ನಂದಿಸುವ ವಿಧಗಳನ್ನು ಅಗ್ನಿಶಾಮಕ ದಳದವರ ಉಪಕರಣಗಳಿಂದ ತಿಳಿಸಿಕೊಟ್ಟರು.</p>.<p>ಬೆಂಕಿ ನಂದಿಸುವ ಸಂದರ್ಭದಲ್ಲಿ ಬಳಸುವ ಸಮವಸ್ತ್ರಗಳ ಕುರಿತು, ನೀರಿನಿಂದ ಉಂಟಾಗುವ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಬೇಕು, ಕೆಲವು ಉರಗ ಮತ್ತು ಪ್ರಾಣಿಗಳಿಂದ ಜನರನ್ನು ಮತ್ತು ನಮ್ಮನ್ನು ನಾವು ಹೇಗೆ ರಕ್ಷಿಸಿಕೊಳ್ಳಬೇಕು ಮೊದಲಾದ ವಿಷಯಗಳನ್ನು ತಿಳಿಸಿಕೊಟ್ಟರು.</p>.<p>ಎನ್ಎಸ್ಎಸ್ ಘಟಕದ ಸಂಯೋಜಕ ಪ್ರೊ.ಗಾದೆಪ್ಪ, ಪ್ರೊ.ವಿರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>