ಯಾವ ದಿನ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ನಾನು ವಿಜಯನಗರಕ್ಕೆ ನೇಮಕಗೊಂಡೆ ಅದೇ ದಿನ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಜಿಲ್ಲೆಯ ಶಾಸಕರು, ಸಂಸದರು ನನಗೆ ಕರೆ ಮಾಡಿ, ಎಲ್ಲ ರೀತಿಯ ಸಹಕಾರ ಕೊಡುವ ಭರವಸೆ ನೀಡಿದ್ದಾರೆ. ಹೊಸ ಜಿಲ್ಲೆ ಅಭಿವೃದ್ಧಿಯಾಗಬೇಕು ಎನ್ನುವುದು ಎಲ್ಲರ ಅಪೇಕ್ಷೆ. ಅದಕ್ಕೆ ತಕ್ಕಂತೆ ಕೆಲಸ ಮಾಡುವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರನ್ನು ಆನಂದ್ ಸಿಂಗ್ ಭೇಟಿಯಾಗಿರುವುದರ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. ವೈಯಕ್ತಿಕ ಸಂಬಂಧ, ಪರಿಚಯ ಇರುತ್ತದೆ. ಅವರ ಜೊತೆಗಿನ ಭೇಟಿಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ಪ್ರತಿಕ್ರಿಯಿಸಿದರು.