ಮೂರು ಸೇತುವೆ ಮುಳುಗಡೆ
ಹೊಸಪೇಟೆ (ವಿಜಯನಗರ): ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಭಾರಿ ಹೆಚ್ಚಳವಾಗಿರುವುದರಿಂದ ಅವಳಿ ಜಿಲ್ಲೆಗಳಾದ ವಿಜಯನಗರ–ಬಳ್ಳಾರಿಯಲ್ಲಿ ಮೂರು ಸೇತುವೆಗಳು ಮಂಗಳವಾರ ಮುಳುಗಿದ್ದು ಸಂಪರ್ಕ ಕಡಿತಗೊಂಡಿದೆ.
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಹಲುವಾಗಲು-ಗರ್ಭಗುಡಿ ಸಂಪರ್ಕಿಸುವ ಸೇತುವೆ, ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲ್ಲೂಕಿನ ಕಂಪ್ಲಿ–ಗಂಗಾವತಿ, ಕಂಪ್ಲಿ–ಸಿರುಗುಪ್ಪ ಸೇತುವೆ ಮುಳುಗಿರುವುದರಿಂದ ಸಂಪರ್ಕ ಕಡಿದು ಹೋಗಿದೆ. ಹರಪನಹಳ್ಳಿ, ಕಂಪ್ಲಿಯಲ್ಲಿ ಭತ್ತ, ಮೆಕ್ಕೆಜೋಳ, ಕಬ್ಬು, ಬಾಳೆ ಗದ್ದೆಗಳಿಗೆ ನೀರು ನುಗ್ಗಿದೆ. ಸಂಡೂರು ತಾಲ್ಲೂಕಿನ ಚೋರನೂರು ಗ್ರಾಮದಲ್ಲಿ ಮನೆ ಗೋಡೆ ಕುಸಿದು ಬಿದ್ದಿದೆ.