<p><strong>ಹೊಸಪೇಟೆ (ವಿಜಯನಗರ):</strong> ‘ಯಡಿಯೂರಪ್ಪ ವಿರುದ್ಧ ನನ್ನನ್ನು ಎತ್ತಿಕಟ್ಟಿ ಬಲಿ ಪಶು ಮಾಡಿದವರೇ, ಈಗ ಬಸನಗೌಡ ಪಾಟೀಲ ಯತ್ನಾಳ ಅವರನ್ನೂ ಬಳಸಿಕೊಳ್ಳುತ್ತಿದ್ದಾರೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದರು.</p>.<p>‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಯತ್ನಾಳ ಅವರನ್ನು ಎತ್ತಿಕಟ್ಟಲಾಗುತ್ತಿದೆ. ಆದರೆ, ಯತ್ನಾಳ ಅವರೂ ವೀರಶೈವ ಸಮಾಜದ ನಾಯಕರು. ಅವರ ಬಗ್ಗೆ ನಮಗೆ ಅಪಾರ ಗೌರವವಿದೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಯತ್ನಾಳ ಅವರನ್ನು ಕೆಲವರು ಯಡಿಯೂರಪ್ಪ ವಿರುದ್ಧ ಮಾತನಾಡಲು ಎತ್ತಿ ಕಟ್ಟಿದ್ದಾರೆ. ಅವರನ್ನು ಚೂರಿಯಂತೆ ಬಳಸುತ್ತಿದ್ದಾರೆ. ಹಿಂದೆ ನನ್ನನ್ನೂ ಸಹ ಇದೇ ರೀತಿ ಬಳಸಿಕೊಂಡಿದ್ದರು, ಬಳಿಕ ನನಗೆ ಜ್ಞಾನೋದಯವಾಯಿತು. ಪಕ್ಷದ ಅಧ್ಯಕ್ಷರ ವಿರುದ್ಧ ಮಾತನಾಡುವವರು ಮುಖ್ಯಮಂತ್ರಿಯೂ ಆಗಲ್ಲ, ಪಕ್ಷದ ಅಧ್ಯಕ್ಷರೂ ಆಗಲ್ಲ’ ಎಂದರು.</p>.<p>‘ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ. ಅಧಿಕಾರ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವೆ ಸಂಘರ್ಷ ಏರ್ಪಟ್ಟಿದೆ. ಈ ಗಲಾಟೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂಗಳದಲ್ಲೂ ಬಗೆಹರಿದಿಲ್ಲ. ಇಬ್ಬರೂ ಒಂದಾಗಿ ಹೋಗಿ ಎಂದು ಹೈಕಮಾಂಡ್ ಸೂಚನೆ ನೀಡಿದರೂ, ತಿಕ್ಕಾಟ ಮುಗಿದಿಲ್ಲ. ಬಜೆಟ್ ಅಧಿವೇಶನದ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ‘ಯಡಿಯೂರಪ್ಪ ವಿರುದ್ಧ ನನ್ನನ್ನು ಎತ್ತಿಕಟ್ಟಿ ಬಲಿ ಪಶು ಮಾಡಿದವರೇ, ಈಗ ಬಸನಗೌಡ ಪಾಟೀಲ ಯತ್ನಾಳ ಅವರನ್ನೂ ಬಳಸಿಕೊಳ್ಳುತ್ತಿದ್ದಾರೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದರು.</p>.<p>‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಯತ್ನಾಳ ಅವರನ್ನು ಎತ್ತಿಕಟ್ಟಲಾಗುತ್ತಿದೆ. ಆದರೆ, ಯತ್ನಾಳ ಅವರೂ ವೀರಶೈವ ಸಮಾಜದ ನಾಯಕರು. ಅವರ ಬಗ್ಗೆ ನಮಗೆ ಅಪಾರ ಗೌರವವಿದೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಯತ್ನಾಳ ಅವರನ್ನು ಕೆಲವರು ಯಡಿಯೂರಪ್ಪ ವಿರುದ್ಧ ಮಾತನಾಡಲು ಎತ್ತಿ ಕಟ್ಟಿದ್ದಾರೆ. ಅವರನ್ನು ಚೂರಿಯಂತೆ ಬಳಸುತ್ತಿದ್ದಾರೆ. ಹಿಂದೆ ನನ್ನನ್ನೂ ಸಹ ಇದೇ ರೀತಿ ಬಳಸಿಕೊಂಡಿದ್ದರು, ಬಳಿಕ ನನಗೆ ಜ್ಞಾನೋದಯವಾಯಿತು. ಪಕ್ಷದ ಅಧ್ಯಕ್ಷರ ವಿರುದ್ಧ ಮಾತನಾಡುವವರು ಮುಖ್ಯಮಂತ್ರಿಯೂ ಆಗಲ್ಲ, ಪಕ್ಷದ ಅಧ್ಯಕ್ಷರೂ ಆಗಲ್ಲ’ ಎಂದರು.</p>.<p>‘ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ. ಅಧಿಕಾರ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವೆ ಸಂಘರ್ಷ ಏರ್ಪಟ್ಟಿದೆ. ಈ ಗಲಾಟೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂಗಳದಲ್ಲೂ ಬಗೆಹರಿದಿಲ್ಲ. ಇಬ್ಬರೂ ಒಂದಾಗಿ ಹೋಗಿ ಎಂದು ಹೈಕಮಾಂಡ್ ಸೂಚನೆ ನೀಡಿದರೂ, ತಿಕ್ಕಾಟ ಮುಗಿದಿಲ್ಲ. ಬಜೆಟ್ ಅಧಿವೇಶನದ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>