ಮರಿಯಮ್ಮನಹಳ್ಳಿಯ ಐದನೇ ವಾರ್ಡಿನ ರಾಘವೇಂದ್ರ ಶೆಟ್ಟಿ ಅವರ ಮನೆಯಲ್ಲಿ ಗುರುವಾರ ತಡರಾತ್ರಿವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಬಳಿಕ ಎಸಿ ಲೀಕ್ ಆಗಿದೆ. ವಿಷಯ ಅರಿತು ಮನೆಯ ಕೆಳಭಾಗದಲ್ಲಿ ಮಲಗಿದ್ದ ರಾಘವೇಂದ್ರ ಶೆಟ್ಟಿ, ಅವರ ಪತ್ನಿ ರಾಜೇಶ್ವರಿ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ಆದರೆ, ಮನೆಯ ಮೊದಲ ಮಹಡಿಯ ಬೆಡ್ ರೂಮ್ ನಲ್ಲಿ ಮಲಗಿದ್ದ ವೆಂಕಟ್ ಪ್ರಶಾಂತ್, ಚಂದ್ರಕಲಾ, ಅರ್ದ್ವಿಕ್ ಹಾಗೂ ಪ್ರೇರಣಾ ಹೊರಗೆ ಬರಲಾಗದೆ ಉಸಿರುಗಟ್ಟಿ, ಸುಟ್ಟ ಗಾಯಗಳಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.