ಹೊಸಪೇಟೆ (ವಿಜಯನಗರ): ಜೂಜು ಅಡ್ಡೆ ಮೇಲೆ ದಾಳಿ ನಡೆಸಿ ಹಣ ವಶಪಡಿಸಿಕೊಂಡಿದ್ದ ಮಾಹಿತಿ ಮುಚ್ಚಿಟ್ಟಿದ್ದ ನಾಲ್ವರು ಪೊಲೀಸರನ್ನು ಬಂಧಿಸಲಾಗಿದೆ.
ಪಟ್ಟಣ ಪೊಲೀಸ್ ಠಾಣೆಯಕಾನ್ಸ್ಟೆಬಲ್ಗಳಾದ ಮಹೇಶ್, ಅಭಿಷೇಕ್, ಮಂಜುನಾಥ ಹಾಗೂ ಶ್ರೀಕಾಂತ ಅವರನ್ನು ಕೋರ್ಟ್ಗೆ ಹಾಜರುಪಡಿಸಿದ್ದು, ಅವರೀಗ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ತಿಳಿಸಿದ್ದಾರೆ.
ಆಗಿದ್ದೇನು?: ‘ದೀಪಾವಳಿ ಹಬ್ಬದ ಅಂಗವಾಗಿ ಅ. 23ರಂದು ತಡರಾತ್ರಿ ನಗರದ ಚಲುವಾದಿ ಕೇರಿಯಲ್ಲಿ ಕೆಲವರು ಜೂಜು ಆಡುತ್ತಿದ್ದರು.
ಆಗ ದಾಳಿ ನಡೆಸಿದ್ದ ಕಾನ್ಸ್ಟೆಬಲ್ಗಳು ಅವರಿಂದ ₹20 ಸಾವಿರ ನಗದು, ₹3 ಸಾವಿರ ಮೌಲ್ಯದ ಮೊಬೈಲ್ ಫೋನ್ ವಶಪಡಿಸಿ ಕೊಂಡಿದ್ದರು. ಆದರೆ, ಈ ಕುರಿತು ಠಾಣೆಯ ಅಧಿಕಾರಿಗಳಿಗೆ ಮಾಹಿತಿ ನೀಡಿರಲಿಲ್ಲ. ಪ್ರಕರಣವನ್ನು ದಾಖಲಿಸಿರಲಿಲ್ಲ’ ಎಂದು ತಿಳಿಸಿದ್ದಾರೆ.