<p><strong>ಹೊಸಪೇಟೆ (ವಿಜಯನಗರ):</strong> ಹಣ ಪಡೆದು ಉಪಾಹಾರ, ಊಟ ಕೊಡಲಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದರಿಂದ ಗುರುವಾರ ನಗರಸಭೆಯ ಅಧಿಕಾರಿಗಳು ನಗರದ ಇಂದಿರಾ ಕ್ಯಾಂಟೀನ್ಗಳಿಗೆ ಭೇಟಿ ನೀಡಿ ಅದರ ನಿರ್ವಾಹಕರು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡು, ಉಚಿತವಾಗಿ ಒದಗಿಸಲು ಕ್ರಮ ಕೈಗೊಂಡರು.</p>.<p>ನಗರಸಭೆಯ ಪರಿಸರ ಎಂಜಿನಿಯರ್ ಆರತಿ, ಆರೋಗ್ಯ ಇನ್ಸ್ಪೆಕ್ಟರ್ ವೆಂಕಟೇಶ್ ಅವರು ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿದರು. ‘ಹಣ ಪಡೆದು ಊಟ ಕೊಡುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಯಾರೂ ಆ ರೀತಿ ಮಾಡಬಾರದು. ಯಾರೇ ಬರಲಿ, ಉಚಿತ ಉಪಾಹಾರ, ಊಟ ಕೊಡಬೇಕು. ಇಲ್ಲವಾದಲ್ಲಿ ಕ್ರಮ ಜರುಗಿಸಲಾಗುವುದು’ ಎಂದು ಅಲ್ಲಿನ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.</p>.<p>‘ಬೆಳಿಗ್ಗೆ, ಮಧ್ಯಾಹ್ನ ಹಾಗೂ ಸಂಜೆ ಸಮಯಕ್ಕೆ ಸರಿಯಾಗಿ ಗುಣಮಟ್ಟದ ಆಹಾರ ಪೂರೈಸಬೇಕು. ಎಷ್ಟೇ ಜನ ಬಂದರೂ ಕೊಡಬೇಕು. ಯಾವುದೇ ಸಬೂಬು ಹೇಳಬಾರದು. ಸ್ವಚ್ಛತೆಗೆ ಹೆಚ್ಚಿನ ಒತ್ತು ಕೊಡಬೇಕು. ನಿಯಮ ಮೀರಿದರೆ ಟೆಂಡರ್ ರದ್ದುಪಡಿಸಲಾಗುವುದು’ ಎಂದು ಆರತಿ ಎಚ್ಚರಿಸಿದರು.</p>.<p>‘ಕೋವಿಡ್–19 ನಿಷೇಧಾಜ್ಞೆ ಮುಗಿಯುವವರೆಗೆ ಇಂದಿರಾ ಕ್ಯಾಂಟೀನ್ಗಳಲ್ಲಿ ಉಚಿತವಾಗಿ ಆಹಾರ ಕೊಡಬೇಕು ಎಂದು ಸರ್ಕಾರ ನಿರ್ದೇಶನ ಕೊಟ್ಟಿದೆ. ಅದನ್ನು ಎಲ್ಲರೂ ಪಾಲಿಸಬೇಕು. ಕೂಲಿ ಕಾರ್ಮಿಕರು, ವಲಸಿಗರು ಹಾಗೂ ದುರ್ಬಲ ವರ್ಗದವರು ಹಸಿವಿನಿಂದ ಬಳಲಬಾರದು ಎಂಬ ದೃಷ್ಟಿಯಿಂದ ಸರ್ಕಾರ ಈ ಕ್ರಮ ಜರುಗಿಸಿದೆ. ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು’ ಎಂದು ಸೂಚಿಸಿದರು.</p>.<p>ಸರ್ಕಾರಿ ಆಸ್ಪತ್ರೆ ಹಾಗೂ ಎಪಿಎಂಸಿಯಲ್ಲಿನ ಇಂದಿರಾ ಕ್ಯಾಂಟೀನ್ ಸಮಯಕ್ಕೆ ಸರಿಯಾಗಿ ಬಾಗಿಲು ತೆರೆದು, ಉಪಹಾರ ಕೊಟ್ಟರೆ, ನಗರಸಭೆ ಕಚೇರಿಗೆ ಹೊಂದಿಕೊಂಡಂತೆ ಇರುವ ಕ್ಯಾಂಟೀನ್ ಗುರುವಾರ ತಡವಾಗಿ ಬಾಗಿಲು ತೆರೆಯಿತು. ಅನೇಕ ಜನ ಬೆಳಿಗ್ಗೆ 7 ಗಂಟೆಗೆ ಕ್ಯಾಂಟೀನ್ ಬಾಗಿಲು ತೆರೆಯುವುದನ್ನು ಕಾದು ಕುಳಿತಿದ್ದರು. ಬುಧವಾರ ಕ್ಯಾಂಟೀನ್ಗಳಲ್ಲಿ ಹಣ ಪಡೆದು, ಆಹಾರ ಕೊಟ್ಟಿದ್ದರಿಂದ ಸಾರ್ವಜನಿಕರು ನಗರಸಭೆಗೆ ದೂರು ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಹಣ ಪಡೆದು ಉಪಾಹಾರ, ಊಟ ಕೊಡಲಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದರಿಂದ ಗುರುವಾರ ನಗರಸಭೆಯ ಅಧಿಕಾರಿಗಳು ನಗರದ ಇಂದಿರಾ ಕ್ಯಾಂಟೀನ್ಗಳಿಗೆ ಭೇಟಿ ನೀಡಿ ಅದರ ನಿರ್ವಾಹಕರು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡು, ಉಚಿತವಾಗಿ ಒದಗಿಸಲು ಕ್ರಮ ಕೈಗೊಂಡರು.</p>.<p>ನಗರಸಭೆಯ ಪರಿಸರ ಎಂಜಿನಿಯರ್ ಆರತಿ, ಆರೋಗ್ಯ ಇನ್ಸ್ಪೆಕ್ಟರ್ ವೆಂಕಟೇಶ್ ಅವರು ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿದರು. ‘ಹಣ ಪಡೆದು ಊಟ ಕೊಡುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಯಾರೂ ಆ ರೀತಿ ಮಾಡಬಾರದು. ಯಾರೇ ಬರಲಿ, ಉಚಿತ ಉಪಾಹಾರ, ಊಟ ಕೊಡಬೇಕು. ಇಲ್ಲವಾದಲ್ಲಿ ಕ್ರಮ ಜರುಗಿಸಲಾಗುವುದು’ ಎಂದು ಅಲ್ಲಿನ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.</p>.<p>‘ಬೆಳಿಗ್ಗೆ, ಮಧ್ಯಾಹ್ನ ಹಾಗೂ ಸಂಜೆ ಸಮಯಕ್ಕೆ ಸರಿಯಾಗಿ ಗುಣಮಟ್ಟದ ಆಹಾರ ಪೂರೈಸಬೇಕು. ಎಷ್ಟೇ ಜನ ಬಂದರೂ ಕೊಡಬೇಕು. ಯಾವುದೇ ಸಬೂಬು ಹೇಳಬಾರದು. ಸ್ವಚ್ಛತೆಗೆ ಹೆಚ್ಚಿನ ಒತ್ತು ಕೊಡಬೇಕು. ನಿಯಮ ಮೀರಿದರೆ ಟೆಂಡರ್ ರದ್ದುಪಡಿಸಲಾಗುವುದು’ ಎಂದು ಆರತಿ ಎಚ್ಚರಿಸಿದರು.</p>.<p>‘ಕೋವಿಡ್–19 ನಿಷೇಧಾಜ್ಞೆ ಮುಗಿಯುವವರೆಗೆ ಇಂದಿರಾ ಕ್ಯಾಂಟೀನ್ಗಳಲ್ಲಿ ಉಚಿತವಾಗಿ ಆಹಾರ ಕೊಡಬೇಕು ಎಂದು ಸರ್ಕಾರ ನಿರ್ದೇಶನ ಕೊಟ್ಟಿದೆ. ಅದನ್ನು ಎಲ್ಲರೂ ಪಾಲಿಸಬೇಕು. ಕೂಲಿ ಕಾರ್ಮಿಕರು, ವಲಸಿಗರು ಹಾಗೂ ದುರ್ಬಲ ವರ್ಗದವರು ಹಸಿವಿನಿಂದ ಬಳಲಬಾರದು ಎಂಬ ದೃಷ್ಟಿಯಿಂದ ಸರ್ಕಾರ ಈ ಕ್ರಮ ಜರುಗಿಸಿದೆ. ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು’ ಎಂದು ಸೂಚಿಸಿದರು.</p>.<p>ಸರ್ಕಾರಿ ಆಸ್ಪತ್ರೆ ಹಾಗೂ ಎಪಿಎಂಸಿಯಲ್ಲಿನ ಇಂದಿರಾ ಕ್ಯಾಂಟೀನ್ ಸಮಯಕ್ಕೆ ಸರಿಯಾಗಿ ಬಾಗಿಲು ತೆರೆದು, ಉಪಹಾರ ಕೊಟ್ಟರೆ, ನಗರಸಭೆ ಕಚೇರಿಗೆ ಹೊಂದಿಕೊಂಡಂತೆ ಇರುವ ಕ್ಯಾಂಟೀನ್ ಗುರುವಾರ ತಡವಾಗಿ ಬಾಗಿಲು ತೆರೆಯಿತು. ಅನೇಕ ಜನ ಬೆಳಿಗ್ಗೆ 7 ಗಂಟೆಗೆ ಕ್ಯಾಂಟೀನ್ ಬಾಗಿಲು ತೆರೆಯುವುದನ್ನು ಕಾದು ಕುಳಿತಿದ್ದರು. ಬುಧವಾರ ಕ್ಯಾಂಟೀನ್ಗಳಲ್ಲಿ ಹಣ ಪಡೆದು, ಆಹಾರ ಕೊಟ್ಟಿದ್ದರಿಂದ ಸಾರ್ವಜನಿಕರು ನಗರಸಭೆಗೆ ದೂರು ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>