ನಗರಸಭೆಯ ಪರಿಸರ ಎಂಜಿನಿಯರ್ ಆರತಿ, ಆರೋಗ್ಯ ಇನ್ಸ್ಪೆಕ್ಟರ್ ವೆಂಕಟೇಶ್ ಅವರು ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿದರು. ‘ಹಣ ಪಡೆದು ಊಟ ಕೊಡುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಯಾರೂ ಆ ರೀತಿ ಮಾಡಬಾರದು. ಯಾರೇ ಬರಲಿ, ಉಚಿತ ಉಪಾಹಾರ, ಊಟ ಕೊಡಬೇಕು. ಇಲ್ಲವಾದಲ್ಲಿ ಕ್ರಮ ಜರುಗಿಸಲಾಗುವುದು’ ಎಂದು ಅಲ್ಲಿನ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.