<p><strong>ಹೊಸಪೇಟೆ(ವಿಜಯನಗರ): </strong>'ಲೈಫ್ಲೈನ್ ಆಸ್ಪತ್ರೆ ಮೊದಲ ವರ್ಷಾಚರಣೆ ಅಂಗವಾಗಿ ಜ.10 ರಿಂದ 15ರ ವರೆಗೂ ಆಸ್ಪತ್ರೆಯಲ್ಲಿ ವಿವಿಧ ಕಾಯಿಲೆಗಳಿಗೆ ಉಚಿತ ಶಸ್ತ್ರಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ' ಎಂದು ವೈದ್ಯ ರಘುನಾಥ್ ದೀಪಾಲಿ ತಿಳಿಸಿದರು.</p>.<p>‘ಐದು ದಿನಗಳ ಉಚಿತ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಪಿಡಿಯಾಟ್ರಿಕ್, ಜನರಲ್ ಲ್ಯಾಟ್ರೋಸ್ಕೋಪಿಕ್, ಎಲುಬು, ಕೀಲು, ಆರ್ಥೋಸ್ಕೋಪಿಕ್ ಹಾಗೂ ಮಹಿಳೆಯರ ಕಾಯಿಲೆಗಳಿಗೆ ಸಂಬಂಧಿಸಿದಂತೆ ಶಸ್ತ್ರಚಿಕಿತ್ಸೆ ನೆರವೇರಿಸಲಾಗುತ್ತದೆ’ ಎಂದು ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.</p>.<p>‘ಆಸ್ಪತ್ರೆಯ ವೈದ್ಯರಾದ ಶಿರಿಷಾ, ಅಭಿನಂದನ್ ಹಾಗೂ ನನ್ನ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನಡೆಯಲಿದೆ. 60 ರಿಂದ 70 ಜನರಿಗೆ ಶಸ್ತ್ರಚಿಕಿತ್ಸೆ ನಡೆಸುವ ಗುರಿ ಹೊಂದಲಾಗಿದೆ’ ಎಂದು ತಿಳಿಸಿದರು.</p>.<p>‘ಆಸ್ಪತ್ರೆ ಆರಂಭವಾಗಿ ಒಂದು ವರ್ಷವಾಗಿದೆ. ಪ್ರಾರಂಭದಿಂದಲೂ ಆಸ್ಪತ್ರೆ ಜನಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದೆ. ಕೋವಿಡ್ ಎರಡನೆ ಅಲೆಯ ಸಮಯದಲ್ಲೂ ಜನರಿಗೆ ಚಿಕಿತ್ಸೆ ನೀಡಲಾಗಿದೆ. ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸುತ್ತ ಬರಲಾಗಿದೆ’ ಎಂದು ಮಾಹಿತಿ ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ(ವಿಜಯನಗರ): </strong>'ಲೈಫ್ಲೈನ್ ಆಸ್ಪತ್ರೆ ಮೊದಲ ವರ್ಷಾಚರಣೆ ಅಂಗವಾಗಿ ಜ.10 ರಿಂದ 15ರ ವರೆಗೂ ಆಸ್ಪತ್ರೆಯಲ್ಲಿ ವಿವಿಧ ಕಾಯಿಲೆಗಳಿಗೆ ಉಚಿತ ಶಸ್ತ್ರಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ' ಎಂದು ವೈದ್ಯ ರಘುನಾಥ್ ದೀಪಾಲಿ ತಿಳಿಸಿದರು.</p>.<p>‘ಐದು ದಿನಗಳ ಉಚಿತ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಪಿಡಿಯಾಟ್ರಿಕ್, ಜನರಲ್ ಲ್ಯಾಟ್ರೋಸ್ಕೋಪಿಕ್, ಎಲುಬು, ಕೀಲು, ಆರ್ಥೋಸ್ಕೋಪಿಕ್ ಹಾಗೂ ಮಹಿಳೆಯರ ಕಾಯಿಲೆಗಳಿಗೆ ಸಂಬಂಧಿಸಿದಂತೆ ಶಸ್ತ್ರಚಿಕಿತ್ಸೆ ನೆರವೇರಿಸಲಾಗುತ್ತದೆ’ ಎಂದು ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.</p>.<p>‘ಆಸ್ಪತ್ರೆಯ ವೈದ್ಯರಾದ ಶಿರಿಷಾ, ಅಭಿನಂದನ್ ಹಾಗೂ ನನ್ನ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನಡೆಯಲಿದೆ. 60 ರಿಂದ 70 ಜನರಿಗೆ ಶಸ್ತ್ರಚಿಕಿತ್ಸೆ ನಡೆಸುವ ಗುರಿ ಹೊಂದಲಾಗಿದೆ’ ಎಂದು ತಿಳಿಸಿದರು.</p>.<p>‘ಆಸ್ಪತ್ರೆ ಆರಂಭವಾಗಿ ಒಂದು ವರ್ಷವಾಗಿದೆ. ಪ್ರಾರಂಭದಿಂದಲೂ ಆಸ್ಪತ್ರೆ ಜನಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದೆ. ಕೋವಿಡ್ ಎರಡನೆ ಅಲೆಯ ಸಮಯದಲ್ಲೂ ಜನರಿಗೆ ಚಿಕಿತ್ಸೆ ನೀಡಲಾಗಿದೆ. ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸುತ್ತ ಬರಲಾಗಿದೆ’ ಎಂದು ಮಾಹಿತಿ ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>