<p><strong>ಹರಪ್ಪನಹಳ್ಳಿ:</strong> ಉಚ್ಚಂಗಿದುರ್ಗ ಸಮೀಪದ ನಾಗತಿಕಟ್ಟೆ ತಾಂಡದಲ್ಲಿ ಶನಿವಾರ ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ತಾಂಡದ ಯುವಕರು ಕಪ್ಪೆಗಳನ್ನು ತಂದು ಮದುವೆ ಹೆಣ್ಣು-ಗಂಡಿನಂತೆ ಶೃಂಗಾರ ಮಾಡಿ ಮದುವೆ ಮಾಡಲಾಯಿತು. ಬೇವಿನ ಉಡುಗೆ ತೊಟ್ಟ ಇಬ್ಬರು ಬಾಲಕರು ಕಪ್ಪೆಗಳನ್ನು ಕೋಲಿನ ಎರಡು ಬದಿಯಲ್ಲಿ ಕಟ್ಟಿಕೊಂಡು 'ಬಾರೋ ಬಾರೋ ಮಳೆರಾಯ, ಬಾಳೆಯ ತೋಟಕ್ಕೆ ನೀರಿಲ್ಲ...' ಎಂದು ಹಾಡುತ್ತಾ ಗ್ರಾಮದ ಮನೆ ಮನೆಗೆ ತೆರಳಿದರು.</p>.<p>ಇವರಿಗೆ ಯುವಕರ ತಂಡ ಸಹಕಾರ ನೀಡಿದರು. ಮನೆ ಮುಂದೆ ಬಂದ ನವ ವಿವಾಹಿತ ಕಪ್ಪೆಗಳಿಗೆ ನೀರು ಹಾಕಿ ಪೂಜೆ ಸಲ್ಲಿಸಿ, ಯುವಕರ ತಂಡಕ್ಕೆ ದೇಣಿಗೆ ರೂಪದಲ್ಲಿ ಹಣ, ಆಹಾರ ಪದಾರ್ಥಗಳನ್ನು ನೀಡಿ ಸಹಕರಿಸಿದರು. ಗ್ರಾಮದಲ್ಲಿ ಮೆರವಣಿಗೆ ಮುಗಿಸಿದ ಬಳಿಕ ಕಪ್ಪೆಗಳನ್ನು ಕೆರೆಯಲ್ಲಿ ವಿಸರ್ಜಿಸಲಾಯಿತು.</p>.<p><a href="https://www.prajavani.net/district/gadaga/july-21st-farmers-martyrs-day-planning-to-varies-farmers-organisations-gathering-at-nargund-846870.html" itemprop="url">ರೈತ ಹುತಾತ್ಮ ದಿನ: ನರಗುಂದದಲ್ಲಿ ಭಾರಿ ಸಮಾವೇಶಕ್ಕೆ ಸಜ್ಜು, ಟಿಕಾಯತ್ಗೆ ಆಹ್ವಾನ </a></p>.<p>ಹೀಗೆ ಸಂಗ್ರಹವಾದ ಪದಾರ್ಥಗಳನ್ನು ಯುವಕರು ಗ್ರಾಮದ ಹೊರ ಭಾಗದಲ್ಲಿ ಒಂದೆಡೆ ಸೇರಿ ಅಡುಗೆ ತಾಯಾರಿಸಿ ಊಟ ಮಾಡಿದರು. ಕಪ್ಪೆಗಳ ಮದುವೆಯಿಂದ ಮಳೆಯಾಗುತ್ತದೆ ಎನ್ನುವ ನಂಬಿಕೆ ಈ ಭಾಗದ ಜನರಲ್ಲಿದೆ.</p>.<p><a href="https://www.prajavani.net/karnataka-news/ysv-datta-letter-to-jds-workers-ahead-of-sumalata-ambarish-and-hd-kumaraswamy-war-846804.html" itemprop="url">ಜೆಡಿಎಸ್ ಕಾರ್ಯಕರ್ತರಿಗೆ ಪತ್ರ ಬರೆದ ವೈಎಸ್ವಿ ದತ್ತಾ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪ್ಪನಹಳ್ಳಿ:</strong> ಉಚ್ಚಂಗಿದುರ್ಗ ಸಮೀಪದ ನಾಗತಿಕಟ್ಟೆ ತಾಂಡದಲ್ಲಿ ಶನಿವಾರ ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ತಾಂಡದ ಯುವಕರು ಕಪ್ಪೆಗಳನ್ನು ತಂದು ಮದುವೆ ಹೆಣ್ಣು-ಗಂಡಿನಂತೆ ಶೃಂಗಾರ ಮಾಡಿ ಮದುವೆ ಮಾಡಲಾಯಿತು. ಬೇವಿನ ಉಡುಗೆ ತೊಟ್ಟ ಇಬ್ಬರು ಬಾಲಕರು ಕಪ್ಪೆಗಳನ್ನು ಕೋಲಿನ ಎರಡು ಬದಿಯಲ್ಲಿ ಕಟ್ಟಿಕೊಂಡು 'ಬಾರೋ ಬಾರೋ ಮಳೆರಾಯ, ಬಾಳೆಯ ತೋಟಕ್ಕೆ ನೀರಿಲ್ಲ...' ಎಂದು ಹಾಡುತ್ತಾ ಗ್ರಾಮದ ಮನೆ ಮನೆಗೆ ತೆರಳಿದರು.</p>.<p>ಇವರಿಗೆ ಯುವಕರ ತಂಡ ಸಹಕಾರ ನೀಡಿದರು. ಮನೆ ಮುಂದೆ ಬಂದ ನವ ವಿವಾಹಿತ ಕಪ್ಪೆಗಳಿಗೆ ನೀರು ಹಾಕಿ ಪೂಜೆ ಸಲ್ಲಿಸಿ, ಯುವಕರ ತಂಡಕ್ಕೆ ದೇಣಿಗೆ ರೂಪದಲ್ಲಿ ಹಣ, ಆಹಾರ ಪದಾರ್ಥಗಳನ್ನು ನೀಡಿ ಸಹಕರಿಸಿದರು. ಗ್ರಾಮದಲ್ಲಿ ಮೆರವಣಿಗೆ ಮುಗಿಸಿದ ಬಳಿಕ ಕಪ್ಪೆಗಳನ್ನು ಕೆರೆಯಲ್ಲಿ ವಿಸರ್ಜಿಸಲಾಯಿತು.</p>.<p><a href="https://www.prajavani.net/district/gadaga/july-21st-farmers-martyrs-day-planning-to-varies-farmers-organisations-gathering-at-nargund-846870.html" itemprop="url">ರೈತ ಹುತಾತ್ಮ ದಿನ: ನರಗುಂದದಲ್ಲಿ ಭಾರಿ ಸಮಾವೇಶಕ್ಕೆ ಸಜ್ಜು, ಟಿಕಾಯತ್ಗೆ ಆಹ್ವಾನ </a></p>.<p>ಹೀಗೆ ಸಂಗ್ರಹವಾದ ಪದಾರ್ಥಗಳನ್ನು ಯುವಕರು ಗ್ರಾಮದ ಹೊರ ಭಾಗದಲ್ಲಿ ಒಂದೆಡೆ ಸೇರಿ ಅಡುಗೆ ತಾಯಾರಿಸಿ ಊಟ ಮಾಡಿದರು. ಕಪ್ಪೆಗಳ ಮದುವೆಯಿಂದ ಮಳೆಯಾಗುತ್ತದೆ ಎನ್ನುವ ನಂಬಿಕೆ ಈ ಭಾಗದ ಜನರಲ್ಲಿದೆ.</p>.<p><a href="https://www.prajavani.net/karnataka-news/ysv-datta-letter-to-jds-workers-ahead-of-sumalata-ambarish-and-hd-kumaraswamy-war-846804.html" itemprop="url">ಜೆಡಿಎಸ್ ಕಾರ್ಯಕರ್ತರಿಗೆ ಪತ್ರ ಬರೆದ ವೈಎಸ್ವಿ ದತ್ತಾ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>