ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚ್ಚಂಗಿದುರ್ಗ: ನಾಗತಿಕಟ್ಟೆ ತಾಂಡದಲ್ಲಿ ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ

Last Updated 10 ಜುಲೈ 2021, 14:18 IST
ಅಕ್ಷರ ಗಾತ್ರ

ಹರಪ್ಪನಹಳ್ಳಿ: ಉಚ್ಚಂಗಿದುರ್ಗ ಸಮೀಪದ ನಾಗತಿಕಟ್ಟೆ ತಾಂಡದಲ್ಲಿ ಶನಿವಾರ ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ತಾಂಡದ ಯುವಕರು ಕಪ್ಪೆಗಳನ್ನು ತಂದು ಮದುವೆ ಹೆಣ್ಣು-ಗಂಡಿನಂತೆ ಶೃಂಗಾರ ಮಾಡಿ ಮದುವೆ ಮಾಡಲಾಯಿತು. ಬೇವಿನ ಉಡುಗೆ ತೊಟ್ಟ ಇಬ್ಬರು ಬಾಲಕರು ಕಪ್ಪೆಗಳನ್ನು ಕೋಲಿನ ಎರಡು ಬದಿಯಲ್ಲಿ ಕಟ್ಟಿಕೊಂಡು 'ಬಾರೋ ಬಾರೋ ಮಳೆರಾಯ, ಬಾಳೆಯ ತೋಟಕ್ಕೆ ನೀರಿಲ್ಲ...' ಎಂದು ಹಾಡುತ್ತಾ ಗ್ರಾಮದ ಮನೆ ಮನೆಗೆ ತೆರಳಿದರು.

ಇವರಿಗೆ ಯುವಕರ ತಂಡ ಸಹಕಾರ ನೀಡಿದರು. ಮನೆ ಮುಂದೆ ಬಂದ ನವ ವಿವಾಹಿತ ಕಪ್ಪೆಗಳಿಗೆ ನೀರು ಹಾಕಿ ಪೂಜೆ ಸಲ್ಲಿಸಿ, ಯುವಕರ ತಂಡಕ್ಕೆ ದೇಣಿಗೆ ರೂಪದಲ್ಲಿ ಹಣ, ಆಹಾರ ಪದಾರ್ಥಗಳನ್ನು ನೀಡಿ ಸಹಕರಿಸಿದರು. ಗ್ರಾಮದಲ್ಲಿ ಮೆರವಣಿಗೆ ಮುಗಿಸಿದ ಬಳಿಕ ಕಪ್ಪೆಗಳನ್ನು ಕೆರೆಯಲ್ಲಿ ವಿಸರ್ಜಿಸಲಾಯಿತು.

ಹೀಗೆ ಸಂಗ್ರಹವಾದ ಪದಾರ್ಥಗಳನ್ನು ಯುವಕರು ಗ್ರಾಮದ ಹೊರ ಭಾಗದಲ್ಲಿ ಒಂದೆಡೆ ಸೇರಿ ಅಡುಗೆ ತಾಯಾರಿಸಿ ಊಟ ಮಾಡಿದರು. ಕಪ್ಪೆಗಳ ಮದುವೆಯಿಂದ ಮಳೆಯಾಗುತ್ತದೆ ಎನ್ನುವ ನಂಬಿಕೆ ಈ ಭಾಗದ ಜನರಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT