<p><strong>ಹೂವಿನಹಡಗಲಿ: </strong>ಪಟ್ಟಣದ ಸೊಪ್ಪಿನ ಕಾಳಮ್ಮ ಬಡಾವಣೆಯಲ್ಲಿ ಮಲ್ಲಿಕಾರ್ಜುನ ಯುವಕ ಸಂಘದಿಂದ ಗಣೇಶೋತ್ಸವ ಪ್ರಯುಕ್ತ ಸೋಮವಾರ ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.</p>.<p>ಸಂಘದ ಸದಸ್ಯರು, ಯುವಕರು ಸೇರಿ 20 ಜನರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಎಂಟು ಜನರು ನೇತ್ರದಾನಕ್ಕೆ ನೋಂದಣಿ ಮಾಡಿಸಿದರು.</p>.<p>ಸಂಘದ ಯುವ ಮುಖಂಡ ಎಸ್.ಎಸ್.ಅರುಣ್ ಮಾತನಾಡಿ, ‘ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಬಡಾವಣೆಯ ಗಣೇಶೋತ್ಸವದಲ್ಲಿ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ, ಯೋಗಾಭ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಬಡಾವಣೆಯ ನಾಗರಿಕರ ಸಹಕಾರದಿಂದ ಸಾಂಸ್ಕೃತಿಕ, ಕ್ರೀಡಾ ಕಾರ್ಯಕ್ರಮ ಆಯೋಜಿಸಿದ್ದೇವೆ’ ಎಂದು ಹೇಳಿದರು.</p>.<p>ಆರೋಗ್ಯಧಾಮ ಆಸ್ಪತ್ರೆಯ ಡಾ.ಬಿ.ನಾಗನಗೌಡ ಮತ್ತು ಸಿಬ್ಬಂದಿ ಆರೋಗ್ಯ ತಪಾಸಣೆ ಶಿಬಿರ ನಡೆಸಿಕೊಟ್ಟರು. ಯುವಕರಾದ ಕೆ. ನವೀನ, ಮಂಜುನಾಥ, ಅರುಣ್, ಅಕ್ಷಯ್, ನಿಖಿಲ್, ಅನಿಲ್, ಮೋಹನ್ ಪರಶೆಟ್ಟಿ, ಶಿವಪ್ರಸಾದ್ ಮೇಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ: </strong>ಪಟ್ಟಣದ ಸೊಪ್ಪಿನ ಕಾಳಮ್ಮ ಬಡಾವಣೆಯಲ್ಲಿ ಮಲ್ಲಿಕಾರ್ಜುನ ಯುವಕ ಸಂಘದಿಂದ ಗಣೇಶೋತ್ಸವ ಪ್ರಯುಕ್ತ ಸೋಮವಾರ ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.</p>.<p>ಸಂಘದ ಸದಸ್ಯರು, ಯುವಕರು ಸೇರಿ 20 ಜನರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಎಂಟು ಜನರು ನೇತ್ರದಾನಕ್ಕೆ ನೋಂದಣಿ ಮಾಡಿಸಿದರು.</p>.<p>ಸಂಘದ ಯುವ ಮುಖಂಡ ಎಸ್.ಎಸ್.ಅರುಣ್ ಮಾತನಾಡಿ, ‘ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಬಡಾವಣೆಯ ಗಣೇಶೋತ್ಸವದಲ್ಲಿ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ, ಯೋಗಾಭ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಬಡಾವಣೆಯ ನಾಗರಿಕರ ಸಹಕಾರದಿಂದ ಸಾಂಸ್ಕೃತಿಕ, ಕ್ರೀಡಾ ಕಾರ್ಯಕ್ರಮ ಆಯೋಜಿಸಿದ್ದೇವೆ’ ಎಂದು ಹೇಳಿದರು.</p>.<p>ಆರೋಗ್ಯಧಾಮ ಆಸ್ಪತ್ರೆಯ ಡಾ.ಬಿ.ನಾಗನಗೌಡ ಮತ್ತು ಸಿಬ್ಬಂದಿ ಆರೋಗ್ಯ ತಪಾಸಣೆ ಶಿಬಿರ ನಡೆಸಿಕೊಟ್ಟರು. ಯುವಕರಾದ ಕೆ. ನವೀನ, ಮಂಜುನಾಥ, ಅರುಣ್, ಅಕ್ಷಯ್, ನಿಖಿಲ್, ಅನಿಲ್, ಮೋಹನ್ ಪರಶೆಟ್ಟಿ, ಶಿವಪ್ರಸಾದ್ ಮೇಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>